ಐಎನ್ಎಸ್ ವಿಕ್ರಮಾದಿತ್ಯ 
ರಾಜ್ಯ

ಐಎನ್ಎಸ್ ವಿಕ್ರಮಾದಿತ್ಯದಲ್ಲಿ ಬೆಂಕಿಗೆ ಸ್ಟೀಮ್ ಪೈಪ್ ಸ್ಫೋಟ ಕಾರಣ:ಮೂಲಗಳ ಮಾಹಿತಿ

ವಿಮಾನವಾಹಕ ನೌಕೆ ಐಎನ್ಎಸ್ ವಿಕ್ರಮಾದಿತ್ಯದ ಎಂಜಿನ್ ಕೊಠಡಿಯಲ್ಲಿ ಸ್ಟೀಮ್ ಪೈಪ್ ನಲ್ಲಿ ...

ಕಾರವಾರ: ವಿಮಾನವಾಹಕ ನೌಕೆ ಐಎನ್ಎಸ್ ವಿಕ್ರಮಾದಿತ್ಯದ ಎಂಜಿನ್ ಕೊಠಡಿಯಲ್ಲಿ ಸ್ಟೀಮ್ ಪೈಪ್ ನಲ್ಲಿ ಸ್ಫೋಟಗೊಂಡ ಪರಿಣಾಮ ಕಾರವಾರದ ಐಎನ್ಎಸ್ ಕದಂಬ ನೌಕಾ ನೆಲೆಯಲ್ಲಿ ಅಗ್ನಿ ಅವಘಡವುಂಟಾಗಿ ಓರ್ವ ನೌಕಾಧಿಕಾರಿ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಘಟನೆಯಲ್ಲಿ ಇತರ 9 ಮಂದಿಗೆ ಗಾಯವಾಗಿತ್ತು.
ಸ್ಫೋಟದಿಂದ ಇಂಧನ ಪೈಪ್ ನಾಶಗೊಂಡು ಎಂಜಿನ್ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಎಂಜಿನ್ ರೂಂನಲ್ಲಿ ಬೆಕಿ ಕಾಣಿಸಿಕೊಂಡಾಗ ಹೊಗೆ ತುಂಬಿ ಉಸಿರಾಡಲಾಗದೆ ಲೆಫ್ಟಿನೆಂಟ್ ಕಮಾಂಡರ್ ಧರ್ಮೇಂದ್ರ ಸಿಂಗ್ ಚೌಹಾಣ್ ಪ್ರಜ್ಞೆ ತಪ್ಪಿ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಇಂಧನ ಪೈಪ್ ನಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಅಗ್ನಿ ಶಾಮಕ ಸಿಬ್ಬಂದಿ ಇಂಧನ ಪೂರೈಕೆಯನ್ನು ನಿಲ್ಲಿಸಿ ಮುಂದಿನ ಹೆಚ್ಚಿನ ಅವಘಡವನ್ನು ತಡೆಯಲು ಪ್ರಯತ್ನಿಸಿದರು.
ಎಂಜಿನ್ ರೂಂನಲ್ಲಿದ್ದ ಸ್ಪ್ರಿಂಕ್ಲರ್ ಗಳು ಸಹ ಸ್ವಯಂಚಾಲಿತವಾಗಿ ಚಲಿತವಾಗಿ ಬೆಂಕಿ ನಿಯಂತ್ರಣಕ್ಕೆ ಬಂದಿತು. ಬೆಂಕಿ ಅವಘಡ ಸಂಭವಿಸಿದಾಗ ವಿಮಾನ ವಾಹಕ ನೌಕೆಯಲ್ಲಿ 1,300 ಜನರಿದ್ದರು ಎಂದು ಮೂಲಗಳು ತಿಳಿಸಿವೆ.
ನೌಕೆಯ ಡೆಕ್ 3ಯಲ್ಲಿ ಬೆಂಕಿ ಕಾಣಿಸಿಕೊಂಡು ಎರಡು ಬೋಗಿಗಳನ್ನು ನಾಶಮಾಡಿದೆ. ನೌಕೆಯಲ್ಲಿ 21 ಹಡಗಿನ ಮೇಲಂತಸ್ತುಗಳಿದ್ದು ಮುಂದಿನ ದಿನಗಳಲ್ಲಿ ಇಂತಹ ದುರ್ಘಟನೆ ಮರುಕಳಿಸದಂತೆ ಸರಿಯಾಗಿ ತಪಾಸಣೆ ಮಾಡಲು ಆದೇಶ ಹೊರಡಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?