ಬೆಳಗಾವಿಯ ಗೀತಾ-ಮಯೂರ್ ದಂಪತಿ 
ರಾಜ್ಯ

ಸಂಪ್ರದಾಯ ಬದಿಗೊತ್ತಿ ಸಂವಿಧಾನದ ಹೆಸರಿನಲ್ಲಿ ಮದುವೆಯಾದ ಬೆಳಗಾವಿ ಜೋಡಿ!

ದುಬಾರಿ ವೆಚ್ಚ ಮಾಡಿ ಮದುವೆಯಾಗುವವರ ಮಧ್ಯೆ ಬೆಳಗಾವಿಯ ಈ ಜೋಡಿ ಆದರ್ಶವಾಗಿ ನಿಲ್ಲುತ್ತಾರೆ....

ಬೆಳಗಾವಿ: ದುಬಾರಿ ವೆಚ್ಚ ಮಾಡಿ ಮದುವೆಯಾಗುವವರ ಮಧ್ಯೆ ಬೆಳಗಾವಿಯ ಈ ಜೋಡಿ ಆದರ್ಶವಾಗಿ ನಿಲ್ಲುತ್ತಾರೆ. ಸತ್ಯಶೋಧಕ ಮೂಲಕ ಈ ಜೋಡೆ ಹಸೆಮಣೆ ಏರಿದ್ದಾರೆ. 18ನೇ ಶತಮಾನದಲ್ಲಿ ಸಮಾಜ ಸುಧಾರಕ ಜ್ಯೋತಿರಾವ್ ಫುಲೆ ಜನಪ್ರಿಯಗೊಳಿಸಿದ ಸತ್ಯಶೋಧಕ ವಿಧಾನವಿದು.
ವೃತ್ತಿಯಲ್ಲಿ ಉಪನ್ಯಾಸಕರಾಗಿರುವ ಬೆಳಗಾವಿಯ ಬಸವನ ಕುಡಚಿಯ ವಧು ಗೀತಾ ಬಾಲಕೃಷ್ಣ ಬೆಡಕ ಮತ್ತು ಬೆಳ್ಗುಂಡಿ ಗ್ರಾಮದ ವರ ಮಯೂರ್ ಹನುಮಂತ್ ನಾಗೇನಹಟ್ಟಿ ಯಾವುದೇ ಸಂಪ್ರದಾಯ, ಶಾಸ್ತ್ರ, ವಿಧಿ-ವಿಧಾನಗಳಿಲ್ಲದೆ, ಅರ್ಚಕರಿಲ್ಲದೆ ಸರಳವಾಗಿ ಕಳೆದ ಶನಿವಾರ ವಿವಾಹವಾಗಿದ್ದಾರೆ.  ಇವರಿಬ್ಬರೂ ಸ್ನಾತಕೋತ್ತರ ಶಿಕ್ಷಣ ಹೊಂದಿದ್ದು ಸತ್ಯ ಮತ್ತು ಅಹಿಂಸೆ ಮೂಲಕ ಬದುಕುವ ತತ್ವವನ್ನು ಅಳವಡಿಸಿಕೊಂಡಿದ್ದಾರೆ. ಮದುವೆ ಕಾರ್ಯಕ್ರಮದ ಸಂಪ್ರದಾಯದಲ್ಲಿ ಸಮಾಜದಲ್ಲಿರುವ ಮೂಢನಂಬಿಕೆಗಳನ್ನು ಹೋಗಲಾಡಿಸಿ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಶ್ರಮಿಸುವುದಾಗಿ ಮಾತುಕೊಟ್ಟಿದ್ದಾರೆ.
ಸಾಮಾನ್ಯವಾಗಿ ಭಾರತೀಯ ಹಿಂದೂ ಸಂಪ್ರದಾಯದಲ್ಲಿ ಮದುವೆಗೆ ಪ್ರಶಸ್ತಿ ದಿನ, ಮುಹೂರ್ತ ನೋಡುತ್ತಾರೆ. ಆದರೆ ಈ ಜೋಡಿ ಅವುಗಳೆಲ್ಲಾ ಸಂಪ್ರದಾಯ, ಮೂಢನಂಬಿಕೆ ಎಂದು ತಿಳಿದು ಅವುಗಳನ್ನು ಧಿಕ್ಕರಿಸಿ ಮದುವೆಯಾಗಿದ್ದಾರೆ.
18ನೇ ಶತಮಾನದಲ್ಲಿ ಬಾಲ್ಯ ವಿವಾಹ ಮತ್ತು ಸತಿ ಪದ್ಧತಿ ಇದ್ದಾಗ ಜ್ಯೋತಿ ಫುಲೆಯವರು ಸತ್ಯಶೋಧಕ ಸಮಾಜ ನಿರ್ಮಿಸಿ ಹೊಸ ವಿವಾಹ ಪದ್ಧತಿ ಜಾರಿಗೆ ತಂದರು. ಪುಲೆಯವರ ಸತ್ಯಶೋಧಕ ಮದುವೆ ವಿಧಾನದಿಂದ ಪ್ರಭಾವಿತರಾಗಿ ಈ ಜೋಡಿ ಸರಳವಾಗಿ ತಮ್ಮದೇ ಆದ ವಿಧಾನದಲ್ಲಿ ಮದುವೆಯಾಗಿದ್ದಾರೆ.
ಈ ಜೋಡಿ ವಿವಾಹವಾಗುವಾಗ ಸಂವಿಧಾನದ ಹೆಸರಿನಲ್ಲಿ ಪ್ರಮಾಣ ತೆಗೆದುಕೊಂಡಿದ್ದಾರೆ. ಮದುವೆ ಕಾರ್ಯಕ್ರಮದಲ್ಲಿ ಹತ್ತಿರದ ಬಂಧುಗಳು ಮತ್ತು ಸ್ನೇಹಿತರು ಭಾಗವಹಿಸಿದ್ದರು. ಮಯೂರ್ ಬೆಳಗಾವಿಯ ಪಂಡಿತ್ ನೆಹರೂ ಪಿಯು ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದಾರೆ. ಎಎನ್ಐಎಸ್ ಸಂಘಟನೆಯ ಸಕ್ರಿಯ ಕಾರ್ಯಕರ್ತ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT