ಸಾಂದರ್ಭಿಕ ಚಿತ್ರ 
ರಾಜ್ಯ

ಜಯಂತಿ ಹೆಸರಲ್ಲಿ ಕೋಟ್ಯಂತರ ರೂ ಲೂಟಿ : ತನಿಖೆ ಆಗ್ರಹಿಸಿ ಮುಖ್ಯ ಕಾರ್ಯದರ್ಶಿಗೆ ದೂರು

ಧಾರ್ಮಿಕ ಹಾಗೂ ಸಮಾಜ ಸುಧಾರಕರ ಜಯಂತಿ ಹೆಸರಲ್ಲಿ ಅಧಿಕಾರಿಗಳು ಕೋಟಿ‌ ಕೋಟಿ ಲೂಟಿ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಬೆಂಗಳೂರು: ಧಾರ್ಮಿಕ ಹಾಗೂ ಸಮಾಜ ಸುಧಾರಕರ ಜಯಂತಿ ಹೆಸರಲ್ಲಿ ಅಧಿಕಾರಿಗಳು ಕೋಟಿ‌ ಕೋಟಿ ಲೂಟಿ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಗಣ್ಯ ವ್ಯಕ್ತಿಗಳ ಜಯಂತಿ ಆಚರಣೆಗೆ ಸರ್ಕಾರ ಬಿಡುಗಡೆ ಮಾಡಿರುವ ಹಣವನ್ನು ಅಧಿಕಾರಿಗಳು  ದುರ್ಬಳಕೆ ಮಾಡಿಕೊಂಡಿದ್ದು,  ಈ ಸಂಬಂಧ ತನಿಖೆ ನಡೆಸುವಂತೆ ಮುಖ್ಯ ಕಾರ್ಯದರ್ಶಿಗೆ ಮಾಹಿತಿ ಹಕ್ಕು ಕಾರ್ಯಕರ್ತ ಮರಿಲಿಂಗೇಗೌಡ‌ ಮಾಲಿ ಪಾಟೀಲ್ ಎಂಬವರು ದೂರು ನೀಡಿದ್ದಾರೆ.

2013ರಿಂದ 2018 ವರೆಗೆ ನಡೆದ ಧಾರ್ಮಿಕ ಹಾಗೂ ಸಾಮಾಜಿಕ ಸುಧಾರಕರ  ಜಯಂತಿಗಳ ದಾಖಲೆ ಸಂಗ್ರಹಿಸಿದ್ದು, ಅದರ ಪ್ರಕಾರ ಸಿದ್ದರಾಮಯ್ಯ ಸರ್ಕಾರದ ವೇಳೆ ಜಯಂತಿಗಳ ಹೆಸರಲ್ಲಿ ಒಟ್ಟು 17.65 ಕೋಟಿ ರೂ. ಖರ್ಚಾಗಿರುವುದು ಬಯಲಾಗಿದೆ.

ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಜಯಂತಿ ಆಚರಣೆ ಮಾಡಲಾಗಿದೆ ಎಂದು ದಾಖಲೆಗಳಲ್ಲಿ ಅಂಕಿ ಅಂಶಗಳಿವೆ. ಆದರೆ ನಿಜವಾಗಿಯೂ ಈ ಜಯಂತಿ ಆಚರಣೆಗಳು ನಡೆದಿರುವ ಬಗ್ಗೆ ಅನುಮಾನ ಮೂಡಿದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಆರೋಪಿಸಿದ್ದಾರೆ.

ಬಸವ ಜಯಂತಿ, ಕನಕ ಜಯಂತಿ, ಟಿಪ್ಪು ಜಯಂತಿ ಸೇರಿ ಅನೇಕ ಗಣ್ಯ ವ್ಯಕ್ತಿಗಳ ಜಯಂತಿಯನ್ನು ಜಿಲ್ಲಾ‌ ಮಟ್ಟದಲ್ಲಿ‌ ಆಚರಿಸಿದ್ದೇವೆ ಎಂದು ಹೇಳಿ ಅಧಿಕಾರಿಗಳು 2013-2018ರವರೆಗೆ ಒಟ್ಟಾರೆ 17.65 ಕೋಟಿ ರೂ.ವನ್ನು ಕನ್ನಡ ಹಾಗೂ ಸಂಸ್ಕೃತಿ ಇಲಾಖೆಯಿಂದ ಬಿಡುಗಡೆ ಮಾಡಿಸಿಕೊಂಡಿದ್ದಾರೆ.
ಇನ್ನೂ ವಿಚಿತ್ರವೆಂದರೆ ಅನೇಕ ಗಣ್ಯರ ಹೆಸರಲ್ಲಿ ಜಯಂತಿ ಆಚರಿಸದೆ ಅಧಿಕಾರಿಗಳು ಹಣ ಖರ್ಚು ಮಾಡಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ ಎಂದು ಆರೋಪಿಸಿದ್ದಾರೆ.
ಯಾವ ಜಯಂತಿಗೆ ಎಷ್ಟು ಖರ್ಚಾಗಿದೆ
ಮೇಲೆ ಉಲ್ಲೇಖಿಸಿದ ಗಣ್ಯರ ಜಯಂತಿಗಳ ಆಚರಣೆಗೆ ಪ್ರಮುಖ ಸಮುದಾಯದ ಸಂಘಟನೆಗಳಿಗೆ ಹಣ ನೀಡಿ ಉಳಿದ ಹಣವನ್ನು ಅಧಿಕಾರಿಗಳು ಹಾಗೂ ಕೆಲವರು ಮುಖಂಡರು ಸೇರಿ ಗುಳುಂ ಮಾಡಿದ್ದಾರೆಂಬ ಶಂಕೆ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ತನಿಖೆ ನಡೆಸಿ ಗಣ್ಯರ ಹೆಸರಿನಲ್ಲಿ ಹಣ ದುರುಪಯೋಗಕ್ಕೆ ಕಡಿವಾಣ ಹಾಕುವಂತೆ ಅವರು ದೂರಿನಲ್ಲಿ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳು ನಾಡು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ TVK ಪಕ್ಷ ಸೇರಿದ ಸೆಂಗೊಟ್ಟೈಯನ್ ವಿಜಯ್

CM ಪಟ್ಟಕ್ಕಾಗಿ ಕಿತ್ತಾಟ: ಡಿಕೆಶಿಗೆ 'ಹೈಕಮಾಂಡ್' ಒಲವು ತೋರಿದ್ರೆ, ಸಿದ್ದರಾಮಯ್ಯರ ಮುಂದಿನ ಪ್ಲಾನ್ ಏನು?

ಶಂಕಿತ ದಾಳಿಕೋರ 'ನರಕ ದೇಶ' ಆಫ್ಘಾನಿಸ್ತಾನದಿಂದ ಬಂದವನು, ಇದು ಭಯೋತ್ಪಾದಕ ಕೃತ್ಯ: ನ್ಯಾಷನಲ್ ಗಾರ್ಡ್ ಮೇಲೆ ದಾಳಿಗೆ Donald Trump ತೀವ್ರ ಖಂಡನೆ

450 ಕೋಟಿ ರೂ. ಮೌಲ್ಯದ ಧರ್ಮೇಂದ್ರ ಆಸ್ತಿ ಯಾರ ಪಾಲಾಗುತ್ತೆ? ಕುತೂಹಲ ಕೆರಳಿಸಿದ ಹೇಮಾ ಮಾಲಿನಿ ಪೋಸ್ಟ್!

ಇದು ಜೈಲಲ್ಲ, ಮದ್ಯದ ಫ್ಯಾಕ್ಟರಿ: ಕೈದಿಗಳಿಂದ ಮದ್ಯ ತಯಾರಿಕೆ? ಏನಾಗುತ್ತಿದೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ?

SCROLL FOR NEXT