ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್‌.ಆರ್.ಉಮಾಶಂಕರ್ 
ರಾಜ್ಯ

ಎಸ್ಎಸ್ ಎಲ್ ಸಿ ಫಲಿತಾಂಶ ಪ್ರಕಟ: ಆನೇಕಲ್ ನ ಸೃಜನಾ, ಕುಮಟಾದ ನಾಗಾಂಜಲಿ ರಾಜ್ಯಕ್ಕೆ ಪ್ರಥಮ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾಮಂಡಳಿ ಕಳೆದ ಮಾರ್ಚ್ ನಲ್ಲಿ ನಡೆಸಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ 73.70ರಷ್ಟು ವಿದ್ಯಾರ್ಥಿಗಳು...

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾಮಂಡಳಿ ಕಳೆದ ಮಾರ್ಚ್ ನಲ್ಲಿ ನಡೆಸಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ 73.70ರಷ್ಟು ವಿದ್ಯಾರ್ಥಿಗಳು ತೇರ್ಗಡೆಹೊಂದಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ 1.8 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಕಳೆದ ವರ್ಷ ಶೇ. 71.93ರಷ್ಟು ಫಲಿತಾಂಶ ದಾಖಲಾಗಿತ್ತು.

ಈ ಬಾರಿ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶೇ. 79.59 ರಷ್ಟು ಬಾಲಕಿಯರು ಹಾಗೂ ಶೇ. 68.46ರಷ್ಟು ಬಾಲಕರು ತೇರ್ಗಡೆ ಹೊಂದಿದ್ದಾರೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಜೂನ್ 21ರಿಂದ 27ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ.

ಕಳೆದ ಬಾರಿ ಮೊದಲ ಸ್ಥಾನ ಗಳಿಸಿದ್ದ ಉಡುಪಿಯನ್ನು ಹಿಂದಿಕ್ಕಿರುವ ಹಾಸನ ಜಿಲ್ಲೆ ಪ್ರಥಮ ಸ್ಥಾನ ಗಳಿಸಿದ್ದರೆ, ರಾಮನಗರ ಜಿಲ್ಲೆ ಎರಡನೇ ಸ್ಥಾನ ಗಳಿಸಿದೆ. ಉಡುಪಿ ಜಿಲ್ಲೆ ಐದನೇ ಸ್ಥಾನಕ್ಕೆ ಕುಸಿತ ಕಂಡಿದೆ. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ.

ರಾಜ್ಯಾದ್ಯಂತ ಮಾರ್ಚ್ 21ರಿಂದ ಏ.4ರವರೆಗೆ 2847 ಪರೀಕ್ಷಾ ಕೇಂದ್ರಗಳಲ್ಲಿ 8.25 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಏ.10ರಿಂದ ಏ.25ರವರೆಗೆ ಮೌ‌ಲ್ಯಮಾಪನ ನಡೆಸಲಾಗಿತ್ತು. ಈ ಬಾರಿ ಮೌಲ್ಯಮಾಪನ ಪ್ರಕ್ರಿಯೆ ಡಿಜಟಲೀಕರಣಗೊಂಡಿದ್ದು, ನಿರೀಕ್ಷೆಗೂ ಮುನ್ನವೇ ಫಲಿತಾಂಶ ಪ್ರಕಟಿಸಲು ಸಾಧ್ಯವಾಗಿದೆ  ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಇಂದು ಮಧ್ಯಾಹ್ನ 3 ಗಂಟೆಗೆ ಆಯಾ ಶಾಲೆಗಳಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. ಫಲಿತಾಂಶ ಈಗಾಗಕಲೇ ಇಲಾಖೆಯ ವೆಬ್‌ಸೈಟ್ http://kseeb.kar.ni.in ಹಾಗೂ http://karresults.nic.in ಗಳಲ್ಲಿ ಲಭ್ಯ‌ವಿದೆ. ಮಧ್ಯಾಹ್ನದ ನಂತರ ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್‌ ಸಂ‌ಖ್ಯೆಗೆ ಎಸ್ಎಂಎಸ್ ಮೂಲಕ ಫಲಿತಾಂಶ ತಲುಪಲಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT