ಸಂಗ್ರಹ ಚಿತ್ರ 
ರಾಜ್ಯ

ಸಾವಿಗೂ 2 ದಿನ ಮುಂಚಿತವಾಗಿಯೇ ಡೆತ್ ನೋಟ್ ಬರೆದಿದ್ದ ಸಿದ್ಧಾರ್ಥ್!

ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರ ಸಾವು ಹಲವು ಪ್ರಶ್ನೆಗಳನ್ನು ಸೃಷ್ಟಿ ಮಾಡಿದ್ದು, ಸಿದ್ಧಾರ್ಥ್ ಸಾವಿಗೂ 2 ಮುನ್ನವೇ ತಮ್ಮ ಡೆತ್ ನೋಟ್ ಬರೆದಿದ್ದರು ಎಂಬ ವಿಚಾರ ಬೆಳಕಿಗೆ ಬಂದಿದೆ.

ಬೆಂಗಳೂರು: ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರ ಸಾವು ಹಲವು ಪ್ರಶ್ನೆಗಳನ್ನು ಸೃಷ್ಟಿ ಮಾಡಿದ್ದು, ಸಿದ್ಧಾರ್ಥ್ ಸಾವಿಗೂ 2 ಮುನ್ನವೇ ತಮ್ಮ ಡೆತ್ ನೋಟ್ ಬರೆದಿದ್ದರು ಎಂಬ ವಿಚಾರ ಬೆಳಕಿಗೆ ಬಂದಿದೆ.
ಮುಂಬೈ ಮೂಲದ ಫೈನಾನ್ಸ್ ಸಂಸ್ಥೆಯಿಂದ ಸಿದ್ಧಾರ್ಥ್ ಸಾವಿರಾರು ಕೋಟಿ ರೂ ಸಾಲ ಪಡೆದು, ಆದೇ ಫೈನಾನ್ಸ್ ಸಂಸ್ಥೆಯಿಂದ ಸಿದ್ಧಾರ್ಥ್ ಕಿರುಕುಳ ಅನುಭವಿಸಿದ್ದರು. ಕಿರುಕುಳ ತಾಳಲಾರದೇ ಸಿದ್ಧಾರ್ಥ್ ಆತ್ಮಹತ್ಯೆಗೆ ಮುಂದಾಗಿದ್ದರು. ಈ ಸಂಬಂಧ ಜುಲೈ 27ರಂದು ಡೆತ್ ನೋಟ್ ಬರೆದಿಟ್ಟಿದ್ದ ಸಿದ್ಧಾರ್ಥ್, ಆ ಪತ್ರದಲ್ಲಿ ಆರ್ಥಿಕ ಒತ್ತಡ ಮತ್ತು ತೆರಿಗೆ ಇಲಾಖೆಯ ಅಧಿಕಾರಿಗಳ ಕಿರುಕುಳದ ಕುರಿತು ಉಲ್ಲೇಖ ಮಾಡಿದ್ದರು. ಅಲ್ಲದೆ ತಮ್ಮ ಸಿಬ್ಬಂದಿಗಳಿಗೆ ನನ್ನಿಂದ ತೊಂದರೆಯಾಗಬಾರದು ಎಂದು ಆಶಿಸಿದ್ದರು.
ಡಿಕೆ ಶಿವಕುಮಾರ್ ಭೇಟಿಗೆ ಮುಂದಾಗಿದ್ದ ಸಿದ್ಧಾರ್ಥ್
ಇನ್ನು ಸಿದ್ಧಾರ್ಥ್ ಆತ್ಮಹತ್ಯೆಗೂ ಮುನ್ನ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಲು ಮುಂದಾಗಿದ್ದ ವಿಚಾರ ಕೂಡ ಬೆಳಕಿಗೆ ಬಂದಿದೆ. ಜುಲೈ 27ರಂದು ಪತ್ರ ಬರೆದಿದ್ದ ಸಿದ್ಧಾರ್ಥ್ 28ರಂದು ಡಿಕೆಶಿ ಭೇಟಿಗೆ ಮುಂದಾಗಿದ್ದರು. ಆದರೆ ಕಾರಣಾಂತರಗಳಿಂದ ಅದು ಸಾಧ್ಯವಾಗಿರಲಿಲ್ಲ. ಇದೇ ವಿಚಾರವಾಗಿ ಡಿಕೆ ಶಿವಕುಮಾರ್ ಕೂಡ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT