ಗುಂಡಿ ಬಿದ್ದ ಬೆಂಗಳೂರಿನ ರಸ್ತೆ 
ರಾಜ್ಯ

ಕಳಪೆ ರಸ್ತೆಯಿಂದ ಅಪಘಾತವಾಗಿ ಹಾನಿಯಾದರೆ ಬಿಬಿಎಂಪಿಯಿಂದ ಪರಿಹಾರ ಕೇಳಿ:ಹೈಕೋರ್ಟ್ ಆದೇಶ

ನಗರದಲ್ಲಿನ ಕಳಪೆ ರಸ್ತೆಯ ಬಗ್ಗೆ ಹೈಕೋರ್ಟ್ ಬೃಹತ್ ಬೆಂಗಳೂರು ಮಹಾ ...

ಬೆಂಗಳೂರು: ನಗರದಲ್ಲಿನ ಕಳಪೆ ರಸ್ತೆಯ ಬಗ್ಗೆ ಹೈಕೋರ್ಟ್ ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.
ರಸ್ತೆಯ ಅಥವಾ ಫುಟ್ ಪಾತ್ ನ ಕಳಪೆ ನಿರ್ವಹಣೆಯಿಂದ ನಾಗರಿಕರಿಗೆ ಏನೇ ತೊಂದರೆ ಆದರೂ ಅದಕ್ಕೆ ಬಿಬಿಎಂಪಿಯೇ ಜವಾಬ್ದಾರಿ, ಪಾಲಿಕೆಯೇ ಪರಿಹಾರ ನೀಡಬೇಕೆಂದು ಆದೇಶ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರನ್ನೊಳಗೊಂಡ ವಿಭಾಗೀಯ ಪೀಠ, ನಾಗರಿಕರು ತೆರಿಗೆ ಕಟ್ಟಿದ ನಂತರವೂ ಕಳಪೆ ಕಾಮಗಾರಿಯ ರಸ್ತೆ ಮತ್ತು ಫುಟ್ ಪಾತ್ ಗಳಿಂದ ಸಾಕಷ್ಟು ಸಾವು-ನೋವುಗಳನ್ನು ಎದುರಿಸಬೇಕಾದ ಸ್ಥಿತಿಯಿದೆ. ಕಳಪೆ ರಸ್ತೆಯಿಂದ ಅಪಘಾತವಾಗಿ ಗಾಯಗೊಂಡರೆ ಅದರ ಪರಿಹಾರವನ್ನು ಬಿಬಿಎಂಪಿಯಲ್ಲಿ ನಾಗರಿಕರು ಕೇಳಬಹುದು ಎಂದು ಹೇಳಿದೆ.
ಬಿಬಿಎಂಪಿ ವ್ಯಾಪ್ತಿಯ ರಸ್ತೆಗಳು ಹೊಂಡ ಗುಂಡಿಗಳಿಂದ ಕೆಟ್ಟು ಹೋಗಿದ್ದರೆ ಮತ್ತು ಫುಟ್ ಪಾತ್ ಗಳು ಹಾಳಾಗಿದ್ದರೆ ತಪಾಸಣೆ ಮಾಡಿ ಬಿಬಿಎಂಪಿಗೆ ವರದಿ ಸಲ್ಲಿಸುವಂತೆ ಸಂಚಾರಿ ಪೊಲೀಸರಿಗೆ ಹೈಕೋರ್ಟ್ ಇದೇ ಸಂದರ್ಭದಲ್ಲಿ ಆದೇಶ ನೀಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT