ಬೆಂಗಳೂರು: ತಿಂಗಳ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆ ನೇಣಿಗೆ ಶರಣು 
ರಾಜ್ಯ

ಬೆಂಗಳೂರು: ತಿಂಗಳ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆ ನೇಣಿಗೆ ಶರಣು

ಕೇವಲ ಒಂದೂವರೆ ತಿಂಗಳ ಹಿಂದೆ ವಿವಾಹವಾಗಿದ್ದ ನವ ವಿವಾಹಿತೆ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು: ಕೇವಲ ಒಂದೂವರೆ ತಿಂಗಳ ಹಿಂದೆ ವಿವಾಹವಾಗಿದ್ದ ನವ ವಿವಾಹಿತೆ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಕೋಣನಕುಂಟೆ ಆದರ್ಶ ನಗರದಲ್ಲಿ ನಡೆದ ಘಟನೆಯಲ್ಲಿ ಪಲ್ಲವಿ (24) ಎಂಬಾಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮೂಲತಃ ಬಂಗಾರಪೇಟೆಯವಳಾಗಿದ್ದ ಪಲ್ಲವಿ ತಿಂಗಳ ಹಿಂದೆ ನವೀನ್ ಜತೆ ವಿವಾಹವಾಗಿದ್ದಳು.ಬುಧವಾರ ಮನೆಯಲ್ಲಿ ಯಾರೂ ಇರದ ವೇಳೆ ಪಲ್ಲವಿ ತಾನು ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಘಟನೆ ಸುತ್ತ ಹಲವು ಅನುಮಾನಗಳಿದ್ದು ಪಲ್ಲವಿ ಪೋಷಕರು ಪತಿಯ ಕಿರುಕುಳಕ್ಕೆ ಬೇಸತ್ತು ಮಗಳು ನೇಣು ಹಾಕಿಕೊಂಡಿರುವುದಾಗಿ ಆರೋಪಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಎಂದು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ  ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!