ರಾಜ್ಯ

ರಾಜ್ಯದಲ್ಲಿ ರಸಗೊಬ್ಬರದ ಕೊರತೆಯಿಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆ

Nagaraja AB
ಬೆಂಗಳೂರು: ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ಪಷ್ಪಪಡಿಸಿದ್ದಾರೆ. 
ಕೇಂದ್ರ ಸರ್ಕಾರಕ್ಕೆ 75 ಸಾವಿರ ಟನ್ ಯೂರಿಯಾ ಪೂರೈಕೆಗೆ ಬೇಡಿಕೆ ಸಲ್ಲಿಸಲಾಗಿದ್ದು, ಆದಷ್ಟು ಶೀಘ್ರದಲ್ಲಿ ಗೊಬ್ಬರ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು  ಅವರು ಹೇಳಿದರು.
ವಿಧಾನ ಸೌಧದಲ್ಲಿ ಇಂದು ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿ, ಹಾವೇರಿ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ರಸಗೊಬ್ಬರದ ಕೊರತೆ ಬಗ್ಗೆ ಮಾಹಿತಿ ಪಡೆದರು. 
ಡಿಎಪಿ ಮತ್ತು 20: 20 ಖರೀದಿ ಜೊತೆಗೆ ಯೂರಿಯಾ ಖರೀದಿ ಮಾಡುವಂತೆ ಮಾರಾಟಗಾರರ ಮೇಲೆ ಒತ್ತಡ ಹೇರುವುದು, ಗೊಬ್ಬರ ದಾಸ್ತಾನು ಲಭ್ಯವಿಲ್ಲ ಎಂಬ ದೂರುಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.
ಹೆಚ್ಚಿನ ಗೊಬ್ಬರ ಪೂರೈಕೆಗೆ ಕೇಂದ್ರ ಸರ್ಕಾರದ ಸಚಿವರ  ಜೊತೆ ಯಡಿಯೂರಪ್ಪ ಚರ್ಚೆ ನಡೆಸಿ ಹೆಚ್ಚಿನ ಗೊಬ್ಬರ ದಾಸ್ತಾನು ಸಂಗ್ರಹಕ್ಕೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
SCROLL FOR NEXT