ಸಂಗ್ರಹ ಚಿತ್ರ 
ರಾಜ್ಯ

ಸಿದ್ಧಾರ್ಥ್ ಸಾವು: 20 ನಿಮಿಷದ ಪ್ರಯಾಣಕ್ಕೆ ಒಂದೂವರೆ ಗಂಟೆ ಹಿಡಿದಿದ್ದೇಕೆ? ಮಾರ್ಗ ಮಧ್ಯೆ ಏನಾಯ್ತು?

ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರ ಸಾವಿನ ಬೆನ್ನಲ್ಲೇ ಹಲವು ಅನುಮಾನಗಳು ಹುಟ್ಟಿಕೊಳ್ಳುತ್ತಿದ್ದು, ಏತನ್ಮಧ್ಯೆ ಸಿದ್ಧಾರ್ಥ್ ಪ್ರಯಾಣಿಸುತ್ತಿದ್ದ ಕಾರು ಕೂಡ ಇದೀಗ ಸುದ್ದಿಗೆ ಗ್ರಾಸವಾಗಿದೆ.

ಮಂಗಳೂರು: ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರ ಸಾವಿನ ಬೆನ್ನಲ್ಲೇ ಹಲವು ಅನುಮಾನಗಳು ಹುಟ್ಟಿಕೊಳ್ಳುತ್ತಿದ್ದು, ಏತನ್ಮಧ್ಯೆ ಸಿದ್ಧಾರ್ಥ್ ಪ್ರಯಾಣಿಸುತ್ತಿದ್ದ ಕಾರು ಕೂಡ ಇದೀಗ ಸುದ್ದಿಗೆ ಗ್ರಾಸವಾಗಿದೆ.
ಮೂಲಗಳ ಪ್ರಕಾರ ನಾಪತ್ತೆಯಾಗುವ ದಿನ ಸಿದ್ಧಾರ್ಥ್ ಸಕಲೇಶಪುರಕ್ಕೆ ತೆರಳುವುದಾಗಿ ಹೇಳಿ ಡ್ರೈವರ್ ಜೊತೆ ಕಾರಿನಲ್ಲಿ ತೆರಳಿದ್ದರಂತೆ. ಅಂದು ಸಂಜೆ ಸುಮಾರು 5.26ರ ಸಮಯದಲ್ಲಿ ಸಿದ್ಧಾರ್ಥ ಅವರ ಕಾರು ಟೋಲ್‌ಗೇಟ್‌ ದಾಟಿ ಮಂಗಳೂರಿನತ್ತ ಸಾಗಿತ್ತು.  ಬ್ರಹ್ಮರಕೂಟ್ಲು ಟೋಲ್‌ಗೇಟ್‌ನಲ್ಲಿ ಸಿದ್ಧಾರ್ಥ ಕಾರು ಹಾದು ಹೋದ ಸಮಯಕ್ಕೂ ಮಂಗಳೂರಿನಲ್ಲಿ ನಾಪತ್ತೆಯಾದ ಸಮಯದ ಮಧ್ಯೆ ಸಾಕಷ್ಟು ವ್ಯತ್ಯಾಸ ಇರುವುದು ಇದೀಗ ಹಲವು ಅನುಮಾನಗಳಿಗೆ ಕಾರಣವಾಗಿದೆ.
ಸಂಜೆ ಸುಮಾರು 5.26ರ ಸಮಯದಲ್ಲಿ ಸಿದ್ಧಾರ್ಥ ಅವರ ಕಾರು ಬ್ರಹ್ಮರಕೂಟ್ಲು ಟೋಲ್‌ಗೇಟ್‌ ದಾಟಿತ್ತು. ಬಳಿಕ ಚಾಲಕ ನೀಡಿದ ಮಾಹಿತಿಯಂತೆ ಕಾರು ರಾತ್ರಿ 7ರ ವೇಳೆಗೆ ಪಂಪ್‌ ವೆಲ್‌ ಮುಟ್ಟಿತ್ತು. ಆದರೆ ಬ್ರಹ್ಮರಕೂಟ್ಲು ಟೋಲ್ ಗೇಟ್ ನಿಂದ ಪಂಪ್‌ ವೆಲ್ ಗೆ ಬರಲು 15ರಿಂದ 20 ನಿಮಿಷ ಸಮಯ ಸಾಕು. ಆದರೆ ಮಂಗಳೂರಿಗೆ ಬರಲು ಅಷ್ಟು ವಿಳಂಬ ಯಾಕೆ ಎಂಬ ಪ್ರಶ್ನೆ ಎದುರಾಗಿದೆ. ಸಿದ್ಧಾರ್ಥ್ ಪ್ರಯಾಣಿಸುತ್ತಿದ್ದಾಗ ಮಾರ್ಗಮಧ್ಯೆ ಏನಾಯಿತು ಎಂಬ ಪ್ರಶ್ನೆ ಕೂಡ ಎದುರಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT