ಸಂಗ್ರಹ ಚಿತ್ರ 
ರಾಜ್ಯ

ಸಿದ್ಧಾರ್ಥ್ ಸಾವು: 20 ನಿಮಿಷದ ಪ್ರಯಾಣಕ್ಕೆ ಒಂದೂವರೆ ಗಂಟೆ ಹಿಡಿದಿದ್ದೇಕೆ? ಮಾರ್ಗ ಮಧ್ಯೆ ಏನಾಯ್ತು?

ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರ ಸಾವಿನ ಬೆನ್ನಲ್ಲೇ ಹಲವು ಅನುಮಾನಗಳು ಹುಟ್ಟಿಕೊಳ್ಳುತ್ತಿದ್ದು, ಏತನ್ಮಧ್ಯೆ ಸಿದ್ಧಾರ್ಥ್ ಪ್ರಯಾಣಿಸುತ್ತಿದ್ದ ಕಾರು ಕೂಡ ಇದೀಗ ಸುದ್ದಿಗೆ ಗ್ರಾಸವಾಗಿದೆ.

ಮಂಗಳೂರು: ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರ ಸಾವಿನ ಬೆನ್ನಲ್ಲೇ ಹಲವು ಅನುಮಾನಗಳು ಹುಟ್ಟಿಕೊಳ್ಳುತ್ತಿದ್ದು, ಏತನ್ಮಧ್ಯೆ ಸಿದ್ಧಾರ್ಥ್ ಪ್ರಯಾಣಿಸುತ್ತಿದ್ದ ಕಾರು ಕೂಡ ಇದೀಗ ಸುದ್ದಿಗೆ ಗ್ರಾಸವಾಗಿದೆ.
ಮೂಲಗಳ ಪ್ರಕಾರ ನಾಪತ್ತೆಯಾಗುವ ದಿನ ಸಿದ್ಧಾರ್ಥ್ ಸಕಲೇಶಪುರಕ್ಕೆ ತೆರಳುವುದಾಗಿ ಹೇಳಿ ಡ್ರೈವರ್ ಜೊತೆ ಕಾರಿನಲ್ಲಿ ತೆರಳಿದ್ದರಂತೆ. ಅಂದು ಸಂಜೆ ಸುಮಾರು 5.26ರ ಸಮಯದಲ್ಲಿ ಸಿದ್ಧಾರ್ಥ ಅವರ ಕಾರು ಟೋಲ್‌ಗೇಟ್‌ ದಾಟಿ ಮಂಗಳೂರಿನತ್ತ ಸಾಗಿತ್ತು.  ಬ್ರಹ್ಮರಕೂಟ್ಲು ಟೋಲ್‌ಗೇಟ್‌ನಲ್ಲಿ ಸಿದ್ಧಾರ್ಥ ಕಾರು ಹಾದು ಹೋದ ಸಮಯಕ್ಕೂ ಮಂಗಳೂರಿನಲ್ಲಿ ನಾಪತ್ತೆಯಾದ ಸಮಯದ ಮಧ್ಯೆ ಸಾಕಷ್ಟು ವ್ಯತ್ಯಾಸ ಇರುವುದು ಇದೀಗ ಹಲವು ಅನುಮಾನಗಳಿಗೆ ಕಾರಣವಾಗಿದೆ.
ಸಂಜೆ ಸುಮಾರು 5.26ರ ಸಮಯದಲ್ಲಿ ಸಿದ್ಧಾರ್ಥ ಅವರ ಕಾರು ಬ್ರಹ್ಮರಕೂಟ್ಲು ಟೋಲ್‌ಗೇಟ್‌ ದಾಟಿತ್ತು. ಬಳಿಕ ಚಾಲಕ ನೀಡಿದ ಮಾಹಿತಿಯಂತೆ ಕಾರು ರಾತ್ರಿ 7ರ ವೇಳೆಗೆ ಪಂಪ್‌ ವೆಲ್‌ ಮುಟ್ಟಿತ್ತು. ಆದರೆ ಬ್ರಹ್ಮರಕೂಟ್ಲು ಟೋಲ್ ಗೇಟ್ ನಿಂದ ಪಂಪ್‌ ವೆಲ್ ಗೆ ಬರಲು 15ರಿಂದ 20 ನಿಮಿಷ ಸಮಯ ಸಾಕು. ಆದರೆ ಮಂಗಳೂರಿಗೆ ಬರಲು ಅಷ್ಟು ವಿಳಂಬ ಯಾಕೆ ಎಂಬ ಪ್ರಶ್ನೆ ಎದುರಾಗಿದೆ. ಸಿದ್ಧಾರ್ಥ್ ಪ್ರಯಾಣಿಸುತ್ತಿದ್ದಾಗ ಮಾರ್ಗಮಧ್ಯೆ ಏನಾಯಿತು ಎಂಬ ಪ್ರಶ್ನೆ ಕೂಡ ಎದುರಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT