ಸಂಗ್ರಹ ಚಿತ್ರ 
ರಾಜ್ಯ

ಸಿದ್ಧಾರ್ಥ್ ಸಾವು: 20 ನಿಮಿಷದ ಪ್ರಯಾಣಕ್ಕೆ ಒಂದೂವರೆ ಗಂಟೆ ಹಿಡಿದಿದ್ದೇಕೆ? ಮಾರ್ಗ ಮಧ್ಯೆ ಏನಾಯ್ತು?

ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರ ಸಾವಿನ ಬೆನ್ನಲ್ಲೇ ಹಲವು ಅನುಮಾನಗಳು ಹುಟ್ಟಿಕೊಳ್ಳುತ್ತಿದ್ದು, ಏತನ್ಮಧ್ಯೆ ಸಿದ್ಧಾರ್ಥ್ ಪ್ರಯಾಣಿಸುತ್ತಿದ್ದ ಕಾರು ಕೂಡ ಇದೀಗ ಸುದ್ದಿಗೆ ಗ್ರಾಸವಾಗಿದೆ.

ಮಂಗಳೂರು: ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರ ಸಾವಿನ ಬೆನ್ನಲ್ಲೇ ಹಲವು ಅನುಮಾನಗಳು ಹುಟ್ಟಿಕೊಳ್ಳುತ್ತಿದ್ದು, ಏತನ್ಮಧ್ಯೆ ಸಿದ್ಧಾರ್ಥ್ ಪ್ರಯಾಣಿಸುತ್ತಿದ್ದ ಕಾರು ಕೂಡ ಇದೀಗ ಸುದ್ದಿಗೆ ಗ್ರಾಸವಾಗಿದೆ.
ಮೂಲಗಳ ಪ್ರಕಾರ ನಾಪತ್ತೆಯಾಗುವ ದಿನ ಸಿದ್ಧಾರ್ಥ್ ಸಕಲೇಶಪುರಕ್ಕೆ ತೆರಳುವುದಾಗಿ ಹೇಳಿ ಡ್ರೈವರ್ ಜೊತೆ ಕಾರಿನಲ್ಲಿ ತೆರಳಿದ್ದರಂತೆ. ಅಂದು ಸಂಜೆ ಸುಮಾರು 5.26ರ ಸಮಯದಲ್ಲಿ ಸಿದ್ಧಾರ್ಥ ಅವರ ಕಾರು ಟೋಲ್‌ಗೇಟ್‌ ದಾಟಿ ಮಂಗಳೂರಿನತ್ತ ಸಾಗಿತ್ತು.  ಬ್ರಹ್ಮರಕೂಟ್ಲು ಟೋಲ್‌ಗೇಟ್‌ನಲ್ಲಿ ಸಿದ್ಧಾರ್ಥ ಕಾರು ಹಾದು ಹೋದ ಸಮಯಕ್ಕೂ ಮಂಗಳೂರಿನಲ್ಲಿ ನಾಪತ್ತೆಯಾದ ಸಮಯದ ಮಧ್ಯೆ ಸಾಕಷ್ಟು ವ್ಯತ್ಯಾಸ ಇರುವುದು ಇದೀಗ ಹಲವು ಅನುಮಾನಗಳಿಗೆ ಕಾರಣವಾಗಿದೆ.
ಸಂಜೆ ಸುಮಾರು 5.26ರ ಸಮಯದಲ್ಲಿ ಸಿದ್ಧಾರ್ಥ ಅವರ ಕಾರು ಬ್ರಹ್ಮರಕೂಟ್ಲು ಟೋಲ್‌ಗೇಟ್‌ ದಾಟಿತ್ತು. ಬಳಿಕ ಚಾಲಕ ನೀಡಿದ ಮಾಹಿತಿಯಂತೆ ಕಾರು ರಾತ್ರಿ 7ರ ವೇಳೆಗೆ ಪಂಪ್‌ ವೆಲ್‌ ಮುಟ್ಟಿತ್ತು. ಆದರೆ ಬ್ರಹ್ಮರಕೂಟ್ಲು ಟೋಲ್ ಗೇಟ್ ನಿಂದ ಪಂಪ್‌ ವೆಲ್ ಗೆ ಬರಲು 15ರಿಂದ 20 ನಿಮಿಷ ಸಮಯ ಸಾಕು. ಆದರೆ ಮಂಗಳೂರಿಗೆ ಬರಲು ಅಷ್ಟು ವಿಳಂಬ ಯಾಕೆ ಎಂಬ ಪ್ರಶ್ನೆ ಎದುರಾಗಿದೆ. ಸಿದ್ಧಾರ್ಥ್ ಪ್ರಯಾಣಿಸುತ್ತಿದ್ದಾಗ ಮಾರ್ಗಮಧ್ಯೆ ಏನಾಯಿತು ಎಂಬ ಪ್ರಶ್ನೆ ಕೂಡ ಎದುರಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT