ಇಂದಿರಾನಗರ ಮೆಟ್ರೋದಲ್ಲಿ ಬಿರುಕು 
ರಾಜ್ಯ

ಟ್ರಿನಿಟಿ ಸರ್ಕಲ್ ನಂತರ ಇಂದಿರಾನಗರದಲ್ಲಿ ಮೆಟ್ರೋ ಪಿಲ್ಲರ್ ನಲ್ಲಿ ಬಿರುಕು: ಸಂಚಾರ ಸ್ಥಗಿತ

ಇಂದಿರಾನಗರ ಮೆಟ್ರೋ ಸ್ಟೇಷನ್ ಪಿಲ್ಲರ್ ಬೇರಿಂಗ್‍ನಲ್ಲಿ ಬಿರುಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸಂಚಾರ ಸ್ಥಗಿತಗೊಂಡಿದೆ...

ಬೆಂಗಳೂರು: ಇಂದಿರಾನಗರ ಮೆಟ್ರೋ ಸ್ಟೇಷನ್ ಪಿಲ್ಲರ್ ಬೇರಿಂಗ್‍ನಲ್ಲಿ ಬಿರುಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸಂಚಾರ ಸ್ಥಗಿತಗೊಂಡಿದೆ.
ಬಿಎಂಆರ್‌ಸಿಎಲ್ ಕಳಪೆ ಕಾಮಗಾರಿಯಿಂದ ಪಿಲ್ಲರ್ ಬೇರಿಂಗ್‍ನಲ್ಲಿ ಬಿರುಕು ಮೂಡಿದೆ. ಆದರೆ ಪ್ರಯಾಣಿಕರನ್ನು ಕಣ್ಣತಪ್ಪಿಸಿ ಬಿಎಂಆರ್ ಸಿಎಲ್ ರಿಪೇರಿ ಮಾಡುವುದಕ್ಕೆ ಹೊರಟಿದೆ. ಇದರಿಂದಾಗಿ ಮೆಟ್ರೋ ಪ್ರಯಾಣಿಕರಲ್ಲಿ ಆತಂಕ ಶುರುವಾಗಿದೆ. 
ಆರು ತಿಂಗಳ ಹಿಂದೆಯಷ್ಟೇ ಇದೇ ಮಾರ್ಗದಲ್ಲಿ ಮೆಟ್ರೋ ಸಮಸ್ಯೆ ಶುರುವಾಗಿತ್ತು. ಕಳೆದ ಬಾರಿ ಟ್ರಿನಿಟಿ ಸ್ಟೇಷನ್‍ನಲ್ಲಿ ಬಿರುಕು ಕಾಣಿಸಿಕೊಂಡಿತ್ತು. ಮೆಟ್ರೋ ಮೊದಲ ಹಂತದ ಮೊದಲ ಫೇಸ್‍ನಲ್ಲಿ ಉದ್ಘಾಟನೆಯಾದ ಭಾಗ ಇದಾಗಿದೆ. ಆದರೆ ಇದೇ ಮಾರ್ಗದಲ್ಲಿ ಎರಡನೇ ಬಾರಿ ಸಮಸ್ಯೆ ಎದುರಾಗಿದೆ.
ಜುಲೈ 30 ರಂದು ಮೆಟ್ರೋ ಪ್ರತಿಕಾ ಪ್ರಕಟಣೆಯೊಂದನ್ನು ಹೊರಡಿಸಿತ್ತು. ನೆರಳೆ ಮಾರ್ಗದ ಎಂಜಿ ರೋಡ್‍ನಿಂದ ಬೈಯಪ್ಪನಹಳ್ಳಿ ಮೆಟ್ರೋ ನಿರ್ವಹಣೆ ಎಂದು ಮಾಹಿತಿ ನೀಡಿತ್ತು. ಪತ್ರಿಕಾ ಪ್ರಕಟಣೆಯಲ್ಲಿ ನಿರ್ವಹಣೆ ಅಂತಷ್ಟೇ ಮಾಹಿತಿ ನೀಡಲಾಗಿತ್ತು. ಆದರೆ ಈಗ ಪಿಲ್ಲರ್ ಬೇರಿಂಗ್ ಸಮಸ್ಯೆ ಬಯಲಾಗಿದೆ.
ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಿಂದ ಮಹಾತ್ಮಗಾಂಧಿ ರಸ್ತೆ ಮೆಟ್ರೋ ನಿಲ್ದಾಣದವರೆಗೆ ಆಗಸ್ಟ್ 3ರ ರಾತ್ರಿ 9:30ರಿಂದ ಆ. 4ರ ಬೆಳಗ್ಗೆ 11:00 ಗಂಟೆವರೆಗೆ ಮೆಟ್ರೋ ರೈಲಿನ ಸೇವೆಗಳು ಲಭ್ಯವಿರುವುದಿಲ್ಲ.
ಆಗಸ್ಟ್ 3ರಂದು ಬೈಯಪ್ಪನಹಳ್ಳಿಯಿಂದ ಮೈಸೂರು ರಸ್ತೆವರೆಗಿನ ಸೇವೆಯ ಕೊನೆ ರೈಲು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಿಂದ ರಾತ್ರಿ 9:30 ಗಂಟೆಗೆ ಹಾಗೂ ಮೈಸೂರು ರಸ್ತೆ ನಿಲ್ದಾಣದಿಂದ ಬೈಯಪ್ಪನಹಳ್ಳಿ ನಿಲ್ದಾಣದ ಕಡೆಗಿನ ಕೊನೆಯ ರೈಲು ರಾತ್ರಿ 9:00 ಗಂಟೆಗೆ ಹೊರಡಲಿದೆ. ಅದಾಗ್ಯೂ ಮಹಾತ್ಮ ಗಾಂಧಿ ರಸ್ತೆ ಮೆಟ್ರೋ ನಿಲ್ದಾಣದಿಂದ ಮೈಸೂರು ರಸ್ತೆ ನಿಲ್ದಾಣದವರೆಗೆ ಆಗಸ್ಟ್ 3ರ ರಾತ್ರಿಯ ಸೇವೆ ಮುಕ್ತಾಯದವರೆಗೂ ಹಾಗೂ ಆ.4ರಂದು ಬೆಳಗ್ಗೆ 7:00 ಗಂಟೆಯಿಂದ 11:00 ಗಂಟೆಯವರೆಗೆ ಮೆಟ್ರೋ ರೈಲಿನ ಸೇವೆಗಳು ಲಭ್ಯವಿರುತ್ತವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!