ಪಿಎಂ ಕಿಸಾನ್ ಯೋಜನೆ: ತಿಂಗಳೊಳಗೆ ಹೆಚ್ಚುವರಿಯಾಗಿ ನೀಡುವ ಮೊದಲ ಕಂತು ಪಾವತಿಗೆ ಮುಖ್ಯಮಂತ್ರಿ ಸೂಚನೆ 
ರಾಜ್ಯ

ಪ್ರಧಾನಮಂತ್ರಿ ಕಿಸಾನ್ ಯೋಜನೆ: ಒಂದು ತಿಂಗಳಲ್ಲಿ ಮೊದಲ ಕಂತು ಪಾವತಿಗೆ ಕ್ರಮ- ಯಡಿಯೂರಪ್ಪ

ಕೇಂದ್ರ ಸರ್ಕಾರವು ರೈತರಿಗೆ ಪಿಎಂಕಿಸಾನ್ ಯೋಜನೆಯಡಿ ವಾರ್ಷಿಕ 6000 ರೂಪಾಯಿ ನೆರವು ನೀಡುವ ಯೋಜನೆಗೆ ಪೂರಕವಾಗಿ ಕರ್ನಾಟಕ ಸರ್ಕಾರವು ಘೋಷಿಸಿರುವ 4000 ರೂಪಾಯಿ ನೆರವಿನ ಯೋಜನೆ

ಬೆಂಗಳೂರು: ಕೇಂದ್ರ ಸರ್ಕಾರವು ರೈತರಿಗೆ ಪಿಎಂಕಿಸಾನ್ ಯೋಜನೆಯಡಿ ವಾರ್ಷಿಕ 6000 ರೂಪಾಯಿ ನೆರವು ನೀಡುವ ಯೋಜನೆಗೆ ಪೂರಕವಾಗಿ ಕರ್ನಾಟಕ ಸರ್ಕಾರವು ಘೋಷಿಸಿರುವ 4000 ರೂಪಾಯಿ ನೆರವಿನ ಯೋಜನೆ ಜಾರಿಗೆ ಇನ್ನೆರಡು ದಿನಗಳಲ್ಲಿ ಸರ್ಕಾರಿ ಆದೇಶ ಹೊರಡಿಸಲಾಗುವುದು. ಮೊದಲ ಕಂತಿನ 2000 ರೂಪಾಯಿಗಳನ್ನು 15-20 ದಿನಗಳೊಳಗೆ ರೈತರಿಗೆ ಪಾವತಿಸಲು ಕ್ರಮ ವಹಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳು, ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಿಎಂಕಿಸಾನ್ ಯೋಜನೆಯಿಂದ ಬರದಿಂದ ಸಂಕಷ್ಟಕ್ಕೊಳಗಾಗಿರುವ ರೈತನಿಗೆ ಅಲ್ಪ ನೆರವಾದರೂ ದೊರೆಯಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ಬರ ಪರಿಸ್ಥಿತಿ:
ರಾಜ್ಯದಲ್ಲಿ ಈ ಬಾರಿಯೂ ಮಳೆಯ ತೀವ್ರ ಕೊರತೆ ಇದೆ. 2019ರ ಜನವರಿಯಿಂದ ಮೇ 31ರ ವರೆಗೆ ಪೂರ್ವ ಮುಂಗಾರು ಮಳೆಯಲ್ಲಿ ಸರಾಸರಿ ಶೇ. 42 ರಷ್ಟು ಕೊರತೆ ಇದೆ. ರಾಜ್ಯಕ್ಕೆ ಮುಂಗಾರು ಪ್ರವೇಶ ಎರಡು ವಾರ ತಡವಾಗಿದ್ದಲ್ಲದೆ, ಈ ವರೆಗೆ ವಾಡಿಕೆ ಮಳೆಗಿಂತ ಶೇ. 18ರಷ್ಟು ಮಳೆ ಕೊರತೆ ಇದೆ. ಜುಲೈ ತಿಂಗಳಲ್ಲಿಯೂ 3067ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಟ್ಯಾಂಕರ್‍ಗಳ ಮೂಲಕ ಇಲ್ಲವೇ ಖಾಸಗಿ ಬೋರ್‍ವೆಲ್‍ಗಳಿಂದ ನೀರು ಪೂರೈಕೆಯಾಗುತ್ತಿರುವುದು ರಾಜ್ಯದ ಬರ ಪರಿಸ್ಥಿತಿಯ ಗಂಭೀರತೆಗೆ ಸಾಕ್ಷಿ ಎಂದು ಮುಖ್ಯಮಂತ್ರಿಗಳು ಕಳವಳ ವ್ಯಕ್ತಪಡಿಸಿದರು.
ಜನ, ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆ, ಮೇವು ಲಭ್ಯತೆ ಮತ್ತು ಮಹಾತ್ಮಾಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗ ಒದಗಿಸುವ ಮೂಲಕ ಜನ ವಲಸೆ ಹೋಗುವುದನ್ನು ತಡೆಗಟ್ಟಲು ಹಾಗೂ ಅಂತರ್ಜಲ ವೃದ್ಧಿ ಮತುತ ಜಲಸಂರಕ್ಷಣೆಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಬರ ನಿರ್ವಹಣೆ ಮತ್ತು ಪರಿಹಾರ ಕಾರ್ಯಗಳಿಗಾಗಿ ಈ ವರೆಗೆ 618.1 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಸುಮಾರು 422 ಕೋಟಿ ರೂಪಾಯಿ ಅನುದಾನ ಲಭ್ಯವಿದೆ. ಬರ ಪರಿಹಾರ ಮತ್ತಿತರ ತುರ್ತು ಕಾಮಗಾರಿಗಳಿಗೆ ಹಣಕಾಸಿನ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT