ಕಮಲ್ ಪಂಥ್ 
ರಾಜ್ಯ

ಐಪಿಎಸ್ ಅಧಿಕಾರಿಗಳ ವರ್ಗಾವಣೆ: ಕಮಲ್ ಪಂಥ್ ಗುಪ್ತಚರ ವಿಭಾಗದ ಎಡಿಜಿಪಿ

ರಾಜ್ಯ ಪೊಲೀಸ್ ಇಲಾಖೆ ಅಧಿಕಾರಿಗಳನ್ನು ಬದಲಾವಣೆ ಮಾಡಲಾಗಿದ್ದು, ಒಟ್ಟು 11 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆ ಅಧಿಕಾರಿಗಳನ್ನು ಬದಲಾವಣೆ ಮಾಡಲಾಗಿದ್ದು, ಒಟ್ಟು 11 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಮಾನವ ಹಕ್ಕು ಆಯೋಗದ ಎಡಿಜಿಪಿಯಾಗಿದ್ದ ಅಮರ್ ಕುಮಾರ್ ಪಾಂಡೆ ಅವರನ್ನ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿಯಾಗಿ ನೇಮಿಸಲಾಗಿದೆ. ಇದೇ ವಿಭಾಗದ ಎಡಿಜಿಪಿಯಾಗಿದ್ದ ಕಮಲ್ ಪಂಥ್ ಅವರನ್ನು ಗುಪ್ತಚರ ವಿಭಾಗದ ಎಡಿಜಿಪಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.
ಡಾ. ಎ. ಸುಬ್ರಮಣೇಶ್ವರ ರಾವ್ ಅವರನ್ನು ಮಂಗಳೂರಿನ ಪೊಲೀಸ್ ಕಮೀಷನರ್ ಆಗಿ ವರ್ಗಾವಣೆ ಮಾಡಲಾಗಿದ್ದು, ಅಲ್ಲಿನ ಹಾಲಿ ಕಮೀಷನರ್ ಸಂದೀಪ್ ಪಾಟೀಲ್ ಅವರನ್ನು ಬೆಂಗಳೂರಿನ ಅಪರಾಧ ವಿಭಾಗದ ಜಂಟಿ ಕಮೀಷನರ್ ಆಗಿ ವರ್ಗಾಯಿಸಲಾಗಿದೆ. 
ಐಜಿಪಿ ಎಂ ಚಂದ್ರಶೇಖರ್  ಅವರನ್ನು ಎಸಿಬಿಯ ಮುಖ್ಯಸ್ಥರನ್ನಾಗಿ ವಾಪಾಸ್ ಕರೆಸಿಕೊಳ್ಳಲಾಗಿದೆ.  ಡಾ. ಚೇತನ್ ಸಿಂಗ್ ರಾಥೋರ್ ಅವರನ್ನು ಬೆಂಗಳೂರು ಸೆಂಟ್ರಲ್ ವಿಭಾಗದ ಡಿಸಿಪಿಯನ್ನಾಗಿ ವರ್ಗಾಯಿಸಲಾಗಿದೆ. ಆದರೆ, ಅಲ್ಲಿನ ಹಾಲಿ ಡಿಸಿಪಿ ಡಾ. ದೇವರಾಜ್ ಅವರನ್ನು ಯಾವುದೇ ಹುದ್ದೆ ನಿಯೋಜಿಸದೆ ವರ್ಗಾವಣೆ ಮಾಡಲಾಗಿದೆ.
ಡಾ. ಅನೂಪ್ ಶೆಟ್ಟಿ ಎಸ್ ಪಿ- ರಾಮನಗರ, ಕೆಎಂ ಶಾಂತರಾಜು ಎಸ್ಪಿ- ಶಿವಮೊಗ್ಗ ಮತ್ತು ಹನುಮಂತರಾಯಪ್ಪ ಅವರನ್ನು ದಾವಣಗೆರೆ ಎಸ್ಪಿಯಾಗಿ ವರ್ಗಾಯಿಸಿ ಸರ್ಕಾರ ಆದೇಶಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?