ಬಿಎಸ್ ಯಡಿಯೂರಪ್ಪ 
ರಾಜ್ಯ

ಬಕ್ರೀದ್ ಹಬ್ಬಕ್ಕೆ ರಕ್ಷಣೆ ಕೊಡಿ: ಸಿಎಂ ಯಡಿಯೂರಪ್ಪಗೆ ಮುಸ್ಲಿಂ ಶಾಸಕರಿಂದ ಪತ್ರ

ಪವಿತ್ರ ಬಕ್ರೀದ್ ಹಬ್ಬವನ್ನು ನಾಡಿನಾದ್ಯಂತ ಮುಸಲ್ಮಾನ ಬಾಂಧವರು ಆಚರಿಸುತ್ತಿದ್ದು, ಹಬ್ಬ ಆಚರಣೆ ವೇಳೆ ಸೂಕ್ತ ರಕ್ಷಣೆ ನೀಡುವಂತೆ...

ಬೆಂಗಳೂರು: ಪವಿತ್ರ ಬಕ್ರೀದ್ ಹಬ್ಬವನ್ನು ನಾಡಿನಾದ್ಯಂತ ಮುಸಲ್ಮಾನ ಬಾಂಧವರು ಆಚರಿಸುತ್ತಿದ್ದು, ಹಬ್ಬ ಆಚರಣೆ ವೇಳೆ ಸೂಕ್ತ ರಕ್ಷಣೆ ನೀಡುವಂತೆ ಮುಸ್ಲಿಂ ಶಾಸಕರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.
ಆಗಸ್ಟ್ 12 ರಂದು ಹಬ್ಬ ಆಚರಿಸಲಾಗುತ್ತಿದ್ದು, ಅವರವರ ಸಾಮರ್ಥ್ಯಕ್ಕನುಗುಣವಾಗಿ ಹಬ್ಬದಂದು ಬಲಿ ‌ಕೊಡುವ ಪದ್ಧತಿ ಇದೆ. ಹೀಗಾಗಿ ಹಬ್ಬದ ಸಂದರ್ಭದಲ್ಲಿ ವಾಹನಗಳಲ್ಲಿ ಪ್ರಾಣಿ ಸಾಗಾಣಿಕೆಗೆ ಅಡಚಣೆಯಾಗದಂತೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ಸೂಕ್ತ ರಕ್ಷಣೆ ಒದಗಿಸುವಂತೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಸಿಎಂಗೆ ಪತ್ರ ಬರೆದಿದ್ದು, ಪತ್ರಕ್ಕೆ ಶಾಸಕರಾದ ಎನ್.ಎ.ಹ್ಯಾರೀಸ್, ರಹೀಂಖಾನ್, ಸಿ.ಎಂ ಇಬ್ರಾಹಿಂ, ನಜೀರ್ ಅಹ್ಮದ್, ಅಬ್ದುಲ್ ಜಬ್ಬಾರ್ ಸೇರಿದಂತೆ ಇತರೆ ಕಾಂಗ್ರೆಸ್ ಶಾಸಕರು ಸಹಿ ಹಾಕಿದ್ದಾರೆ.
ಮುಸ್ಲಿಂ ಶಾಸಕರ ಮನವಿ ಮೇರೆಗೆ ಹಬ್ಬ ಆಚರಣೆ ವೇಳೆ ಸೂಕ್ತ ಕ್ರಮ ಜರುಗಿಸುವಂತೆ ಯಡಿಯೂರಪ್ಪ ಅವರು ಪೊಲೀಸ್ ಇಲಾಖೆಗೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT