ಆಲಮಟ್ಟಿ ಅಣೆಕಟ್ಟು 
ರಾಜ್ಯ

ಭಾರೀ ಮಳೆ: ಆಲಮಟ್ಟಿ ಅಣೆಕಟ್ಟಿಗೆ ನೀರಿನ ಒಳ ಹರಿವು ಹೆಚ್ಚಳ

ಪಶ್ಚಿಮ ಘಟ್ಟ ಮತ್ತು ಕೃಷ್ಣಾ ನದಿ ಜಲಾನಯದ ಪ್ರದೇಶಗಳಲ್ಲಿ ಭಾರೀ ಮಳೆಯಾಗಿರುವುದರಿಂದ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯ (ಆಲಮಟ್ಟಿ ಅಣೆಕಟ್ಟು) ಉಕ್ಕಿ ...

ಬಾಗಲಕೋಟೆ/ವಿಜಯಪುರ: ಪಶ್ಚಿಮ ಘಟ್ಟ ಮತ್ತು ಕೃಷ್ಣಾ ನದಿ ಜಲಾನಯದ ಪ್ರದೇಶಗಳಲ್ಲಿ ಭಾರೀ ಮಳೆಯಾಗಿರುವುದರಿಂದ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯ(ಆಲಮಟ್ಟಿ ಅಣೆಕಟ್ಟು) ದಲ್ಲಿ ನೀರಿನ ಒಳ ಹರಿವು ಹೆಚ್ಚಾಗಿದೆ. 
ನಿನ್ನೆ ಕೃಷ್ಣಾ ಜಲ ಭಾಗ್ಯ ನಿಗಮ ನಿಯಮಿತದ ಅಧಿಕಾರಿಗಳು ಅಣೆಕಟ್ಟಿಗೆ 2 ಲಕ್ಷದ 5 ಸಾವಿರದ 832 ಕ್ಯೂಸೆಕ್ ನೀರು ಹರಿದು ಬಂದಿದ್ದು ಹೊರಹರಿವು 2 ಲಕ್ಷದ 30 ಸಾವಿರದ 207 ಕ್ಯೂಸೆಕ್ಸ್ ದಾಖಲಾಗಿತ್ತು ಎಂದಿದ್ದಾರೆ. ಕಳೆದ ಮೂರು ದಿನಗಳಲ್ಲಿ ಜಲಾಶಯದ ಎಲ್ಲಾ 26 ಕ್ರೆಸ್ಟ್ ಗೇಟ್ ಗಳಿಂದ ನೀರನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಆಲಮಟ್ಟಿ ಅಣೆಕಟ್ಟಿನಿಂದ 40 ಕಿಲೋ ಮೀಟರ್ ದೂರದಲ್ಲಿರುವ ನಾರಾಯಣಪುರ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದೆ. ನಾರಾಯಣಪುರ ಜಲಾಶಯದಲ್ಲಿ ಕೂಡ ನೀರು ನಿಗದಿತ ಮಟ್ಟ ತಲುಪಿದ್ದು 2 ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡುತ್ತಿದೆ.
ನಿನ್ನೆ ಆಲಮಟ್ಟಿ ಅಣೆಕಟ್ಟಿನಲ್ಲಿ 103.76 ಟಿಎಂಸಿ ನೀರು ಸಂಗ್ರಹವಾಗಿತ್ತು. ಇದರ ಒಟ್ಟು ಸಾಮರ್ಥ್ಯ 123 ಟಿಎಂಸಿ. ಪ್ರತಿದಿನ ಕೆಪಿಟಿಸಿಎಲ್ ಸುಮಾರು 250 ಮೆಗಾವ್ಯಾಟ್ ವಿದ್ಯುತ್ ನ್ನು 6 ವಿದ್ಯುತ್ ಉತ್ಪಾದನಾ ಘಟಕಗಳಿಂದ ಉತ್ಪಾದನೆ ಮಾಡುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT