ಆಲಮಟ್ಟಿ ಅಣೆಕಟ್ಟು 
ರಾಜ್ಯ

ಭಾರೀ ಮಳೆ: ಆಲಮಟ್ಟಿ ಅಣೆಕಟ್ಟಿಗೆ ನೀರಿನ ಒಳ ಹರಿವು ಹೆಚ್ಚಳ

ಪಶ್ಚಿಮ ಘಟ್ಟ ಮತ್ತು ಕೃಷ್ಣಾ ನದಿ ಜಲಾನಯದ ಪ್ರದೇಶಗಳಲ್ಲಿ ಭಾರೀ ಮಳೆಯಾಗಿರುವುದರಿಂದ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯ (ಆಲಮಟ್ಟಿ ಅಣೆಕಟ್ಟು) ಉಕ್ಕಿ ...

ಬಾಗಲಕೋಟೆ/ವಿಜಯಪುರ: ಪಶ್ಚಿಮ ಘಟ್ಟ ಮತ್ತು ಕೃಷ್ಣಾ ನದಿ ಜಲಾನಯದ ಪ್ರದೇಶಗಳಲ್ಲಿ ಭಾರೀ ಮಳೆಯಾಗಿರುವುದರಿಂದ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯ(ಆಲಮಟ್ಟಿ ಅಣೆಕಟ್ಟು) ದಲ್ಲಿ ನೀರಿನ ಒಳ ಹರಿವು ಹೆಚ್ಚಾಗಿದೆ. 
ನಿನ್ನೆ ಕೃಷ್ಣಾ ಜಲ ಭಾಗ್ಯ ನಿಗಮ ನಿಯಮಿತದ ಅಧಿಕಾರಿಗಳು ಅಣೆಕಟ್ಟಿಗೆ 2 ಲಕ್ಷದ 5 ಸಾವಿರದ 832 ಕ್ಯೂಸೆಕ್ ನೀರು ಹರಿದು ಬಂದಿದ್ದು ಹೊರಹರಿವು 2 ಲಕ್ಷದ 30 ಸಾವಿರದ 207 ಕ್ಯೂಸೆಕ್ಸ್ ದಾಖಲಾಗಿತ್ತು ಎಂದಿದ್ದಾರೆ. ಕಳೆದ ಮೂರು ದಿನಗಳಲ್ಲಿ ಜಲಾಶಯದ ಎಲ್ಲಾ 26 ಕ್ರೆಸ್ಟ್ ಗೇಟ್ ಗಳಿಂದ ನೀರನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಆಲಮಟ್ಟಿ ಅಣೆಕಟ್ಟಿನಿಂದ 40 ಕಿಲೋ ಮೀಟರ್ ದೂರದಲ್ಲಿರುವ ನಾರಾಯಣಪುರ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದೆ. ನಾರಾಯಣಪುರ ಜಲಾಶಯದಲ್ಲಿ ಕೂಡ ನೀರು ನಿಗದಿತ ಮಟ್ಟ ತಲುಪಿದ್ದು 2 ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡುತ್ತಿದೆ.
ನಿನ್ನೆ ಆಲಮಟ್ಟಿ ಅಣೆಕಟ್ಟಿನಲ್ಲಿ 103.76 ಟಿಎಂಸಿ ನೀರು ಸಂಗ್ರಹವಾಗಿತ್ತು. ಇದರ ಒಟ್ಟು ಸಾಮರ್ಥ್ಯ 123 ಟಿಎಂಸಿ. ಪ್ರತಿದಿನ ಕೆಪಿಟಿಸಿಎಲ್ ಸುಮಾರು 250 ಮೆಗಾವ್ಯಾಟ್ ವಿದ್ಯುತ್ ನ್ನು 6 ವಿದ್ಯುತ್ ಉತ್ಪಾದನಾ ಘಟಕಗಳಿಂದ ಉತ್ಪಾದನೆ ಮಾಡುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT