ಆಲಮಟ್ಟಿ ಅಣೆಕಟ್ಟು 
ರಾಜ್ಯ

ಭಾರೀ ಮಳೆ: ಆಲಮಟ್ಟಿ ಅಣೆಕಟ್ಟಿಗೆ ನೀರಿನ ಒಳ ಹರಿವು ಹೆಚ್ಚಳ

ಪಶ್ಚಿಮ ಘಟ್ಟ ಮತ್ತು ಕೃಷ್ಣಾ ನದಿ ಜಲಾನಯದ ಪ್ರದೇಶಗಳಲ್ಲಿ ಭಾರೀ ಮಳೆಯಾಗಿರುವುದರಿಂದ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯ (ಆಲಮಟ್ಟಿ ಅಣೆಕಟ್ಟು) ಉಕ್ಕಿ ...

ಬಾಗಲಕೋಟೆ/ವಿಜಯಪುರ: ಪಶ್ಚಿಮ ಘಟ್ಟ ಮತ್ತು ಕೃಷ್ಣಾ ನದಿ ಜಲಾನಯದ ಪ್ರದೇಶಗಳಲ್ಲಿ ಭಾರೀ ಮಳೆಯಾಗಿರುವುದರಿಂದ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯ(ಆಲಮಟ್ಟಿ ಅಣೆಕಟ್ಟು) ದಲ್ಲಿ ನೀರಿನ ಒಳ ಹರಿವು ಹೆಚ್ಚಾಗಿದೆ. 
ನಿನ್ನೆ ಕೃಷ್ಣಾ ಜಲ ಭಾಗ್ಯ ನಿಗಮ ನಿಯಮಿತದ ಅಧಿಕಾರಿಗಳು ಅಣೆಕಟ್ಟಿಗೆ 2 ಲಕ್ಷದ 5 ಸಾವಿರದ 832 ಕ್ಯೂಸೆಕ್ ನೀರು ಹರಿದು ಬಂದಿದ್ದು ಹೊರಹರಿವು 2 ಲಕ್ಷದ 30 ಸಾವಿರದ 207 ಕ್ಯೂಸೆಕ್ಸ್ ದಾಖಲಾಗಿತ್ತು ಎಂದಿದ್ದಾರೆ. ಕಳೆದ ಮೂರು ದಿನಗಳಲ್ಲಿ ಜಲಾಶಯದ ಎಲ್ಲಾ 26 ಕ್ರೆಸ್ಟ್ ಗೇಟ್ ಗಳಿಂದ ನೀರನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಆಲಮಟ್ಟಿ ಅಣೆಕಟ್ಟಿನಿಂದ 40 ಕಿಲೋ ಮೀಟರ್ ದೂರದಲ್ಲಿರುವ ನಾರಾಯಣಪುರ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದೆ. ನಾರಾಯಣಪುರ ಜಲಾಶಯದಲ್ಲಿ ಕೂಡ ನೀರು ನಿಗದಿತ ಮಟ್ಟ ತಲುಪಿದ್ದು 2 ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡುತ್ತಿದೆ.
ನಿನ್ನೆ ಆಲಮಟ್ಟಿ ಅಣೆಕಟ್ಟಿನಲ್ಲಿ 103.76 ಟಿಎಂಸಿ ನೀರು ಸಂಗ್ರಹವಾಗಿತ್ತು. ಇದರ ಒಟ್ಟು ಸಾಮರ್ಥ್ಯ 123 ಟಿಎಂಸಿ. ಪ್ರತಿದಿನ ಕೆಪಿಟಿಸಿಎಲ್ ಸುಮಾರು 250 ಮೆಗಾವ್ಯಾಟ್ ವಿದ್ಯುತ್ ನ್ನು 6 ವಿದ್ಯುತ್ ಉತ್ಪಾದನಾ ಘಟಕಗಳಿಂದ ಉತ್ಪಾದನೆ ಮಾಡುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!