ಬೆಂಗಳೂರು: ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಲು ನಾಳೆ ವಿಜಯಪುರ, ಬೆಳಗಾವಿ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯಪುರ ಮತ್ತು ಬೆಳಗಾವಿ ಜಿಲ್ಲೆಗಳ ಹಲವು ಗ್ರಾಮಗಳು ಜಲಾವೃತವಾಗಿದ್ದು, ಈಗಾಗಲೇ ತುರ್ತು ಪರಿಹಾರ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪರಿಸ್ಥಿತಿಯನ್ನು ಅವಲೋಕಿಸಲು ನಾಳೆ ಬೆಳಗ್ಗೆ ಈ ಎರಡು ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗುವುದು. ನಿರಾಶ್ರಿತ ಕೇಂದ್ರಗಳಿಗೂ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಲಾಗುವುದು ಎಂದು ಅವರು ತಿಳಿಸಿದರು.
ಪ್ರವಾಹ ಉಂಟಾಗಿರುವ ಜಿಲ್ಲೆಗಳ ಜಿಲ್ಲಾಡಳಿತದ ಜೊತೆ ಚರ್ಚೆ ನಡೆಸಿದ್ದೇನೆ, ಮನೆ ಕಳೆದುಕೊಂಡವರಿಗೆ ಶಾಲೆಗಳಲ್ಲಿ ವಸತಿ ಸೌಲಭ್ಯ ಕಲ್ಪಿಸಲಾಗಿದೆ. ಪ್ರವಾಹಕ್ಕೆ ಸಿಲುಕಿರುವ ಜನರ ರಕ್ಷಣೆಗೆ ಹಾಗೂ ಅವರಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅದರಂತೆ ಅಧಿಕಾರಿಗಳು ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದಾರೆ ಎಂದು ಯಡಿಯೂರಪ್ಪ ತಿಳಿಸಿದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos