ಅಲೋಕ್ ಕುಮಾರ್ 
ರಾಜ್ಯ

ವಿನಾಕಾರಣ ವರ್ಗಾವಣೆ ಕಿರುಕುಳ: ಅಲೋಕ್ ಕುಮಾರ್ ಕಿಡಿ

ಕೇವಲ 47 ದಿನಗಳ ಕಾಲ ಅಧಿಕಾರದಲ್ಲಿದ್ದ ಪೊಲೀಸ್ ಕಮೀಷನರ್ ಎಂಬ ಟ್ಯಾಗ್ ನೊಂದಿಗೆ ಅಲೋಕ್ ಕುಮಾರ್ ಕೆಎಸ್ ಆರ್ ಪಿ ಎಡಿಜಿಪಿಯಾಗಿ ವರ್ಗಾವಣೆಯಾಗಿದ್ದಾರೆ

ಬೆಂಗಳೂರು:  ಕೇವಲ 47 ದಿನಗಳ ಕಾಲ ಅಧಿಕಾರದಲ್ಲಿದ್ದ ಪೊಲೀಸ್ ಕಮೀಷನರ್ ಎಂಬ ಟ್ಯಾಗ್ ನೊಂದಿಗೆ ಅಲೋಕ್ ಕುಮಾರ್  ಕೆಎಸ್ ಆರ್ ಪಿ ಎಡಿಜಿಪಿಯಾಗಿ ವರ್ಗಾವಣೆಯಾಗಿದ್ದಾರೆ. ಭಾಸ್ಕರ್ ರಾವ್ ನೂತನ ಕಮೀಷನರ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.
ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಅಲೋಕ್ ಕುಮಾರ್,  ವಿನಾಕಾರಣ ವರ್ಗಾವಣೆ ಮಾಡುವ ಮೂಲಕ  ನನ್ನಗೆ   ಹಾಗೂ ತಮ್ಮ ಕುಟುಂಬಕ್ಕೆ   ತೊಂದರೆ ಕೊಡಲಾಗುತ್ತಿದೆ ಎಂದು ಆರೋಪಿಸಿದರು. 
ಈ ಬಗ್ಗೆ ಯಾವುದೇ ಮಾಹಿತಿ ಕೂಡಾ ನೀಡಿರಲಿಲ್ಲ ಆದಾಗ್ಯೂ, ಶುಕ್ರವಾರ ಅಧಿಕಾರಿಗಳ ಜೊತೆಗೆ ಸಂಪರ್ಕದಲ್ಲಿದೆ. ಕಾರಣ ತಿಳಿಸಿದೆ ಕಚೇರಿ ಅವಧಿ ಮುಗಿದ ನಂತರ ವರ್ಗಾವಣೆ ಆದೇಶ ಕಳುಹಿಸಲಾಗಿದೆ ಎಂದು ಅಲೋಕ್ ಕುಮಾರ್ ಹೇಳಿದರು.
ಕರ್ನಾಟಕ ಪೊಲೀಸ್ ಕಾಯ್ದೆಯಲ್ಲಿ ಕನಿಷ್ಠ 1 ವರ್ಷದ ಅಧಿಕಾರವನ್ನು ಅಧಿಕಾರಿಗಳಿಗೆ ನೀಡಲಾಗುತ್ತದೆ.  20 ದಿನಗಳಿಂದ ಅಧಿಕೃತ ನಿವಾಸದಲ್ಲಿ ವಾಸಿಸುತ್ತಿದ್ದೇವೆ. ಈಗ, ಇದಕ್ಕಿದ್ದಂತೆ ವರ್ಗಾವಣೆ ಮಾಡಿರುವುದರಿಂದ ತೊಂದರೆಯಾಗಿದೆ. ಆದಾಗ್ಯೂ, ಕೇಂದ್ರಿಯ ಆಡಳಿತಾತ್ಮಕ ನ್ಯಾಯಮಂಡಳಿಗೆ ದೂರು ನೀಡುವುದಿಲ್ಲ ಎಂದು ಅವರು ತಿಳಿಸಿದರು. 
ಸರ್ಕಾರದ ಆದೇಶದಂತೆ ಅಧಿಕಾರಿ ಸ್ವೀಕರಿಸಲು ಕಚೇರಿಗೆ ಬಂದಿದ್ದೆ. ಆದರೆ, ಕೆಲ ಕಾಲ ಕಳೆದರೂ ಅಲೋಕ್ ಕುಮಾರ್ ಬಂದಿರಲಿಲ್ಲ. ಆದರೆ, ಅವರು ಬಾರದೆ ಇದ್ದರೂ ಸಿಟಿಸಿಗೆ ಸಹಿ ಹಾಕಿದ್ದಾರೆ.ಪೊಲೀಸ್ ಕಮೀಷನರ್ ಅಧಿಕಾರ ಸ್ವೀಕರಿಸುವಾಗ ಈ ರೀತಿಯಾಗಿ ಹಿಂದೆ ಎಂದೂ  ನಡೆದಿರಲ್ಲ ಎಂದು ಭಾಸ್ಕರರಾವ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT