ಬೆಂಗಳೂರು: ಕೌಟುಂಬಿಕ ಜಗಳದ ಹಿನ್ನೆಲೆಯಲ್ಲಿ ಏಳು ವರ್ಷ ಮಗುವನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಜ್ಯೋತಿ ಎಂಬಾಕೆ ಮಗಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಜ್ಯೋತಿ ತನ್ನ ಏಳು ವರ್ಷದ ಶಾಬುನಾ ಎಂಬ ಹೆಣ್ಣು ಮಗುವನ್ನು ಕೊಂದು ಕಟ್ಟಡದ ಮೇಲಿನಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಂಕಜ್ ಎಂಬವರ ಜೊತೆ ಹನ್ನೆರಡು ವರ್ಷಗಳ ಜ್ಯೋತಿಗೆ ಮದುವೆಯಾಗಿತ್ತು. ಪತಿ ಪಂಕಜ್ ಅವರು ಆಶೋಕ ಪಿಲ್ಲರ್ ಬಳಿ ಹಾರ್ಡ್ ವೇರ್ ಅಂಗಡಿ ಇಟ್ಟುಕೊಂಡಿದ್ದರು. ನಿನ್ನೆ ದಂಪತಿ ನಡುವೆ ಕ್ಷುಲ್ಲಕ ವಿಚಾರಕ್ಕೆ ಜಗಳ ಉಂಟಾಗಿದೆ. ಜಗಳದ ಬಳಿಕ ಬೇಸರಗೊಂಡ ಪತಿ ಮನೆಯಿಂದ ಹೊರಗೆ ಹೋಗಿದ್ದಾರೆ. ಆ ವೇಳೆ ಜ್ಯೋತಿ ತನ್ನ ಮಗಳನ್ನು ಕೊಂದು ಕಟ್ಟಡದಿಂಡ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಘಟನೆ ಕುರಿತಂತೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.