ಯಡಿಯೂರಪ್ಪ ಭೇಟಿ ಮಾಡಿದ ಮೇಯರ್ ಗಂಗಾಂಬಿಕೆ 
ರಾಜ್ಯ

ಮೇಯರ್ ಗಂಗಾಂಬಿಕೆಗೆ ಬಿತ್ತು ದಂಡ!

ನೂತನ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಶುಭ ಕೋರಿದ್ದ ಮೇಯರ್‌ ಗಂಗಾಂಬಿಕೆ ಒಣಹಣ್ಣಿನ ಬುಟ್ಟಿಯನ್ನು ಉಡುಗೊರೆಯಾಗಿ ನೀಡಿ ಪೋಟೊ...

ಬೆಂಗಳೂರು: ಪ್ಲಾಸ್ಟಿಕ್‌ ನಿಷೇಧ ಜಾರಿಯಲ್ಲಿರುವುದನ್ನು ಮರೆತು ಪ್ಲಾಸ್ಟಿಕ್‌ ಬಳಸಿ ಪ್ಯಾಕ್‌ ಮಾಡಿದ ಹಣ್ಣಿನ ಬುಟ್ಟಿಯನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪಗೆ ನೀಡಿದ ಮೇಯರ್‌ ಗಂಗಾಂಬಿಕೆ ಅವರಿಗೆ ಬಿಬಿಎಂಪಿಯಿಂದಲೇ 500 ರೂ. ದಂಡ ವಿಧಿಸಲಾಗಿದೆ. . 
ಪರಿಸರಕ್ಕೆ ಹಾನಿ ಮಾಡುವ ಪ್ಲಾಸ್ಟಿಕ್‌ ಬಳಕೆ ಮಾಡಬಾರದು ಎಂದು ಮೇಯರ್‌ ಗಂಗಾಂಬಿಕೆ ನಗರದಾದ್ಯಂತ ಅಭಿಯಾನ ನಡೆಸುತ್ತಿದ್ದಾರೆ. ಶಾಲಾ-ಕಾಲೇಜು ಮಕ್ಕಳಲ್ಲಿ ಪ್ಲಾಸ್ಟಿಕ್‌ ಬಳಕೆ ಮಾಡುವುದರಿಂದ ಪರಿಸರಕ್ಕೆ ಹಾನಿಯಾಗುತ್ತದೆ ಎಂದು ಅರಿವು ಮೂಡಿಸುತ್ತಿದ್ದಾರೆ. 
ಆದರೆ ಜು.30 ರಂದು ನೂತನ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಶುಭ ಕೋರಿದ್ದ ಮೇಯರ್‌ ಗಂಗಾಂಬಿಕೆ ಒಣಹಣ್ಣಿನ ಬುಟ್ಟಿಯನ್ನು ಉಡುಗೊರೆಯಾಗಿ ನೀಡಿ ಪೋಟೊ ತೆಗೆಸಿಕೊಂಡಿದ್ದರು. 
ಇದೇ ಪೋಟೊಗೆ ಜಾಲತಾಣಗಳಲ್ಲಿ ವ್ಯಾಪಕ ಟೀಕೆ ಕೇಳಿಬಂದಿತ್ತು. ಪ್ಲಾಸ್ಟಿಕ್‌ ಬಳಕೆ ನಿಷೇಧ ಇದ್ದರೂ ಮೇಯರ್‌ ಅವರು ಪ್ಲಾಸ್ಟಿಕ್‌ನಿಂದ ಸುತ್ತಿದ್ದ ಒಣಹಣ್ಣಿನ ಬುಟ್ಟಿಯನ್ನು ನೀಡಿರುವುದು ಟೀಕೆಗೊಳಗಾಗಿತ್ತು. 
ಈ ಬೆಳವಣಿಗೆ ಬಳಿಕ ಮೇಯರ್‌ ಅವರಿಗೆ ಬಿಬಿಎಂಪಿ ಆರೋಗ್ಯ ಅಧಿಕಾರಿಗಳು 500 ರೂ. ದಂಡ ವಿಧಿಸಿ ರಶೀದಿ ಕೊಟ್ಟಿದ್ದಾರೆ. ತಮ್ಮ ತಪ್ಪಿನ ಅರಿವಾಗಿರುವ ಮೇಯರ್‌ ಗಂಗಾಂಬಿಕೆ, ಮುಂದೆ ಎಂದೂ ಪ್ಲಾಸ್ಟಿಕ್‌ ಬಳಸಿರುವ ಪ್ಯಾಕ್‌ ಮಾಡಿದ ಉಡುಗೊರೆ ಕೊಡುವುದಿಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT