ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ವ್ಹೀಲಿಂಗ್ ವೀರರಿಗೆ ಗ್ರಾಮಸ್ಥರಿಂದ ಧರ್ಮದೇಟು!

ವ್ಹೀಲಿಂಗ್ ಮಾಡುತ್ತಿದ್ದ ಮೂವರು ಯುವಕರನ್ನು ತಲಘಟ್ಟಪುರದ ಬಳಿಯ ಹೆಮ್ಮಿಗೆಪುರದ ಗ್ರಾಮಸ್ಥರು ಹಿಡಿದು ಧರ್ಮದೇಟು ಕೊಟ್ಟು ತಕ್ಕ ಪಾಠ ಕಲಿಸಿದ್ದಾರೆ....

ಬೆಂಗಳೂರು: ವ್ಹೀಲಿಂಗ್ ಮಾಡುತ್ತಿದ್ದ ಮೂವರು ಯುವಕರನ್ನು ತಲಘಟ್ಟಪುರದ ಬಳಿಯ ಹೆಮ್ಮಿಗೆಪುರದ ಗ್ರಾಮಸ್ಥರು ಹಿಡಿದು ಧರ್ಮದೇಟು ಕೊಟ್ಟು ತಕ್ಕ ಪಾಠ ಕಲಿಸಿದ್ದಾರೆ.
ನೈಸ್ ರಸ್ತೆಯ ಹೆಮ್ಮಿಗೆಪುರದ ಬಳಿ  ಎರಡು ಸ್ಕೂಟರ್‍ಗಳಲ್ಲಿ ನಾಲ್ವರು ಯುವಕರು ವೀಲಿಂಗ್ ಮಾಡುತ್ತಿರುವುದದನ್ನು ನೋಡಿದ ಹೆಮ್ಮಿಗೆಪುರದ ಗ್ರಾಮಸ್ಥರು ಅವರನ್ನು ತಡೆದು, ಹಿಗ್ಗಾಮುಗ್ಗಾ ಥಳಿಸಿ ಮತ್ತೊಮ್ಮೆ ವೀಲಿಂಗ್ ಮಾಡದಂತೆ ಎಚ್ಚರಿಕೆ ಕೊಟ್ಟಿದ್ದಾರೆ.
ಗ್ರಾಮಸ್ಥರಿಂದ ಗೂಸಾ ತಿಂದ ಯುವಕರ ಹೆಸರು ತಿಳಿದು ಬಂದಿಲ್ಲ. ಗ್ರಾಮಸ್ಥರು ಯುವಕರನ್ನು ಥಳಿಸಿದ್ದು ಅಷ್ಟೇ ಅಲ್ಲದೆ ಸ್ಕೂಟರ್ ಗಳಿಗೆ ಕಲ್ಲು, ಕೋಲಿನಿಂದ ಹೊಡೆದು ಜಖಂಗೊಳಿಸಿದ್ದಾರೆ.
ಇತ್ತೀಚೆಗಷ್ಟೇ ಸ್ಕೂಟರ್‍ನಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಯುವಕರು ಡಿಕ್ಕಿ ಹೊಡೆದು ಹೆಮ್ಮಿಗೆಪುರದ ಸಿದ್ದಪ್ಪ ಎನ್ನುವರ ಕಾಲು ಮುರಿದಿತ್ತು.ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ವೀಲಿಂಗ್ ಮಾಡುವ ಯುವಕರಿಗೆ ಪಾಠ ಕಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT