ಸಂಗ್ರಹ ಚಿತ್ರ 
ರಾಜ್ಯ

ಸುಷ್ಮಾ ಸ್ವರಾಜ್‌ ಅಗಲಿಕೆ ನಮ್ಮನ್ನು ಅನಾಥರನ್ನಾಗಿಸಿದೆ: ಬಿ.ಶ್ರೀರಾಮುಲು

ಸುಷ್ಮಾ ಸ್ವರಾಜ್ ಇವತ್ತು ನಮ್ಮೊಂದಿಗೆ‌ ಇಲ್ಲ. ಅವರ ಅಗಲಿಕೆ ನಮ್ಮನ್ನ ಅನಾಥರನ್ನಾಗಿಸಿದೆ. ಇಷ್ಟು ಬೇಗ ಸುಷ್ಮಾ ಅವರು ನಮ್ಮನ್ನ ಅಗಲಿ ಹೋಗುತ್ತಾರೆ ...

ಬೆಂಗಳೂರು: ಸುಷ್ಮಾ ಸ್ವರಾಜ್ ಇವತ್ತು ನಮ್ಮೊಂದಿಗೆ‌ ಇಲ್ಲ. ಅವರ ಅಗಲಿಕೆ ನಮ್ಮನ್ನ ಅನಾಥರನ್ನಾಗಿಸಿದೆ. ಇಷ್ಟು ಬೇಗ ಸುಷ್ಮಾ ಅವರು ನಮ್ಮನ್ನ ಅಗಲಿ ಹೋಗುತ್ತಾರೆ ಎಂದು ಊಹಿಸಿರಲಿಲ್ಲ ಎಂದು ಮೊಳಕಾಲ್ಮೂರು ಶಾಸಕ ಶ್ರೀರಾಮುಲು ವಿಷಾದ ವ್ಯಕ್ತಪಡಿಸಿದ್ದಾರೆ.
ಬಳ್ಳಾರಿಗೂ ಸುಷ್ಮಾ ಅವರಿಗೂ ಅವಿನಾಭಾವ ಸಂಬಂಧವಿದೆ. ನಮ್ಮನ್ನು ಅವರು ತಮ್ಮ ಮಕ್ಕಳಂತೆ ವಾತ್ಸಲ್ಯದಿಂದ ನೋಡಿಕೊಳ್ಳುತ್ತಿದ್ದರು. ನಾವು ಇವತ್ತು ತಾಯಿಯನ್ನು ಕಳೆದುಕೊಂಡ ಮಕ್ಕಳಾಗಿದ್ದೇವೆ.
ಗೌರಿ ಹಬ್ಬ, ವರಮಹಾಲಕ್ಷ್ಮೀ ಹಬ್ಬ ಬಂತು ಎಂದರೆ ಬಳ್ಳಾರಿಯಲ್ಲಿ ಸಡಗರ ಶುರುವಾಗುತ್ತಿತ್ತು. ಇಡೀ ಬಳ್ಳಾರಿಯ ಜನ ಅವರನ್ನ ಅಮ್ಮಾ ಎಂದೇ ಕರೆಯುತ್ತಿದ್ದರು. ಅವರಿಗೂ ಬಳ್ಳಾರಿ ನೆಲದ ಮೇಲೆ ಅಗಾಧ ಪ್ರೀತಿ ಇತ್ತು. ಬಳ್ಳಾರಿಯಲ್ಲಿ ಎಷ್ಟೋ ಬಾರಿ ಅವರು ಕನ್ನಡದಲ್ಲಿ ಭಾಷಣ ಮಾಡಿದ್ದೂ ಇದೆ. ಇವತ್ತು ನಮ್ಮ ಮನೆ ಅಮ್ಮನಿಲ್ಲದ ಮನೆಯಂತಾಗಿದೆ ಎಂದು ಬೇಸರಪಟ್ಟರು. 
ನಾವು ರಾಜಕಾರಣಿಗಳ ಮಕ್ಕಳಲ್ಲ. ನಾವು ರಾಜಕೀಯ ಪ್ರವೇಶಕ್ಕೆ ಸುಷ್ಮಾ ಸ್ವರಾಜ್ ಅವರೇ ಕಾರಣ. ನಮ್ಮ ಸೇವೆ ಸಮಾಜಕ್ಕೆ ಬಹಳ ಇದೆ ಎಂದು ಅರಿವು ಮೂಡಿಸಿ ರಾಜಕಾರಣಕ್ಕೆ ತಂದವರೇ ಅವರು. ಹಾಗಾಗಿ ಸಾಮಾನ್ಯ ಕುಟುಂಬದಲ್ಲಿ ಬೆಳೆದ ನಾವು ಇವತ್ತು ಅವರ ಆಶೀರ್ವಾದದಿಂದ ಈ ಮಟ್ಟಕ್ಕೆ ಬೆಳೆದೆವು.‌ ಅವರ ಪ್ರೀತಿ, ವಾತ್ಸಲ್ಯವನ್ನು ಉಸಿರು ಇರುವ ತನಕ ಮರೆಯುವ ಹಾಗಿಲ್ಲ. 
ಬಳ್ಳಾರಿಯಿಂದ ಲೋಕಸಭೆ ಅಭ್ಯರ್ಥಿಯಾಗಿ ಕೂಡ ಹಿಂದೆ ಸ್ಪರ್ಧೆ ಮಾಡಿದ್ದರು ಎಂದರು.
ಶ್ರೀಲಂಕಾದಲ್ಲಿ ನಡೆದ ಬಾಂಬ್ ಸ್ಫೋಟ, ಕೊಲ್ಲಿ ರಾಷ್ಟ್ರಗಳಲ್ಲಿ ಕನ್ನಡಿಗರು ಸಿಲುಕಿಕೊಂಡಾಗ ಕನ್ನಡಿಗರಂತೆಯೆ ಮಿಡಿದ ತಾಯಿ ಸುಷ್ಮಾ ಸ್ವರಾಜ್. ಪಾಕಿಸ್ತಾನದ ಅಧ್ಯಕ್ಷರಾಗಿದ್ದಾಗ ಮುಷರಫ್ ರನ್ನು ಕೂಡ ತಣ್ಣಗಾಗಿಸಿದ್ದ ಗಟ್ಟಿಗಿತ್ತಿ ನಮ್ಮ ಸುಷ್ಮಾ ಸ್ವರಾಜ್‌ ಎಂದು ಹಳೆಯ ನೆನಪುಗಳನ್ನು ಸ್ಮರಿಸಿದರು.
 ಇಂದಿರಾಗಾಂಧಿ ನಂತರ ವಿದೇಶಾಂಗ ಸಚಿವೆಯಾಗಿದ್ದ ಸುಷ್ಮಾ ಸ್ವರಾಜ್‌ ಅವರು ಹಿಂದೂ-ಮುಸ್ಲಿಂ ನಡುವೆ ಭಾವೈಕ್ಯತೆ ಸಾರುತ್ತಿದ್ದರು. ವಿದೇಶಾಂಗ ಸಚಿವೆಯಾಗಿದ್ದಾಗ ಭಯೋತ್ಪಾದನೆಯ ವಿರುದ್ಧ ಸಮರ ಸಾರಿದ್ದ ಅವರಿಗೆ ಇಡೀ ವಿಶ್ವವೇ ಬೆಂಬಲವಾಗಿ ನಿಂತಿತ್ತು. ವಿಶ್ವಸಂಸ್ಥೆಯಲ್ಲಿ‌ ಕೂಡ ಅವರು ಭಯೋತ್ಪಾದನೆ ವಿರುದ್ಧ ಗುಡುಗಿದ್ದರು. ಅವರ ವಾತ್ಸಲ್ಯದ ಹೃದಯದಿಂದಲೇ ಸೂಪರ್ ಮಾಮ್ ಆಫ್ ಇಂಡಿಯಾ ಎಂಬ ಬಿರುದು ಪಡೆದಿದ್ದರು ಎಂದು ಶ್ಲಾಘಿಸಿದ್ದಾರೆ. 
ಅವರನ್ನು ಕಳೆದುಕೊಂಡ ನಾವು ಇವತ್ತು‌ ಅನಾಥ ಮಕ್ಕಳಂತೆ ಆಗಿದ್ದೇವೆ. ಅವರ ಕುಟುಂಬಕ್ಕೆ ಅವರ ಅಗಲಿಕೆಯ ದುಖಃ ಬರಿಸುವ ಶಕ್ತಿ ನೀಡಲಿ. ಅವರನ್ನ ಕಳೆದುಕೊಂಡ ನಾವು ಇಂದು ತಬ್ಬಲಿಗಳಾಗಿದ್ದೇವೆ. ನಮ್ಮ ತಾಯಿಯ ಆತ್ಮಕ್ಕೆ ಶಾಂತಿ ಸಿಗಲಿ. ನಮ್ಮ ಅಮ್ಮ ಮತ್ತೆ ಹುಟ್ಟಿ ಬರಲಿ ಎಂದು ಬೇಡಿಕೊಳ್ಳುತ್ತೇನೆ ಎಂದು ಶ್ರೀರಾಮುಲು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT