ಸಂಗ್ರಹ ಚಿತ್ರ 
ರಾಜ್ಯ

ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ: ಜಯಚಾಮರಾಜ ಒಡೆಯರ್ ಪುತ್ಥಳಿ ಪ್ರಮುಖ ಆಕರ್ಷಣೆ

ಸ್ವಾತಂತ್ರ್ಯೋತ್ಸವದ ಅಂಗವಾಗಿ ಪ್ರತಿವರ್ಷದಂತೆ ಈ ಬಾರಿಯೂ ಬೆಂಗಳೂರಿನ ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಇದೇ ತಿಂಗಳ 9 ರಿಂದ ಆಗಸ್ಟ್ 18 ರವರೆಗೆ....

ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಪ್ರತಿವರ್ಷದಂತೆ ಈ ಬಾರಿಯೂ ಬೆಂಗಳೂರಿನ ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಇದೇ ತಿಂಗಳ 9 ರಿಂದ ಆಗಸ್ಟ್ 18 ರವರೆಗೆ ನಡೆಯಲಿರುವ 210ನೇ ಫಲಪುಷ್ಪ ಪ್ರದರ್ಶನ ಹಲವು ವಿಶೇಷತೆಗಳಿಂದ ಕೂಡಿದೆ. 
ಇಂದು ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ತೋಟಗಾರಿಕೆ ಇಲಾಖೆ ನಿರ್ದೇಶಕ ಡಾ. ಎಂ. ವಿ. ವೆಂಕಟೇಶ್, ಈ ಬಾರಿ ಜಯಚಾಮರಾಜ ಒಡೆಯರ್ ಅವರ ಸಾಧನೆಗಳು, ಕೊಡುಗೆಗಳನ್ನು ಜನರಿಗೆ ಪರಿಚಯಿಸಲಾಗುತ್ತಿದೆ. ಫಲಪುಷ್ಪ ಪ್ರದರ್ಶನದಲ್ಲಿ ಮೈಸೂರು ರಾಜ ಮನೆತನದ ಕೊನೆಯ ಮಹಾರಾಜರಾದ ಜಯ ಚಾಮರಾಜ ಒಡೆಯರ್ ಅವರ ಶ್ವೇತ ವರ್ಣದ ಎದೆ ಎತ್ತರದ ಪುತ್ಥಳಿ ವಿಶೇಷ ಆಕರ್ಷಣೆಯಾಗಿದೆ ಎಂದರು. 
ಜಯ ಚಾಮರಾಜ ಒಡೆಯರ್ ಅವರ ಜನ್ಮ ಶತಮಾನೋತ್ಸವದ ನೆನಪಿನಲ್ಲಿ ಮೈಸೂರಿನಲ್ಲಿ ಜಯಚಾಮರಾಜ ವೃತ್ತದಲ್ಲಿರುವ ಮಂಟಪದ ಮಾದರಿಯಲ್ಲಿ ಯಥಾವತ್ ಪುಷ್ಪ ಮಂಟಪ ಅನಾವರಣಗೊಳ್ಳಲಿದೆ.  ಪ್ರದರ್ಶನಕ್ಕೆ ರಾಜಮಾತೆ ಪ್ರಮೋದ ದೇವಿ, ಯುವರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಗೆ ಆಹ್ವಾನ ನೀಡಲಾಗುವುದು ಎಂದರು.
ಒಡೆಯರ್ ಅವರ ಪುಷ್ಪಮಂಟಪ ನಿರ್ಮಾಣಕ್ಕಾಗಿ 1.5 ಲಕ್ಷ ಕೆಂಪು ಗುಲಾಬಿ, 50 ಸಾವಿರ ಬಿಳಿ ಗುಲಾಬಿ, 50 ಸಾವಿರ ಕಿತ್ತಳೆ ವರ್ಣದ ಗುಲಾಬಿ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇದಲ್ಲದೇ 4 ಅಡಿ ಅಗಲ 3 ಅಡಿ ಎತ್ತರದ ಮೈಸೂರು ಸಿಂಹಾಸನ ಪ್ರದರ್ಶನ ಇನ್ನೊಂದು ವೈಶಿಷ್ಟ್ಯವಾಗಿದೆ ಎಂದರು. 
ಫಲಪುಷ್ಪ ಪ್ರದರ್ಶನಕ್ಕೆ ವಯಸ್ಕರಿಗೆ 70 ರೂ. ಶುಲ್ಕ, 12 ವರ್ಷದೊಳಗಿನ ಮಕ್ಕಳಿಗೆ 20 ರೂ. ಶುಲ್ಕ, ಆಗಸ್ಟ್ 9, 13, 14, 16  ಮತ್ತು 17 ರಂದು ಸರ್ಕಾರಿ ಮತ್ತು ಖಾಸಗಿ ಶಾಲಾ ಮಕ್ಕಳಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT