ಸಾಂದರ್ಭಿಕ ಚಿತ್ರ 
ರಾಜ್ಯ

ಮಡಿಕೇರಿ: ಕೊರಿಯರ್ ನಲ್ಲಿ ಬಂದ ದೇವರ ತೀರ್ಥ ಸೇವಿಸಿ ವ್ಯಕ್ತಿ ಸಾವು

ದೇವಸ್ಥಾನದ ತೀರ್ಥದ ಹೆಸರಿನಲ್ಲಿ ಕೊರಿಯರ್ ಮೂಲಕ ಬಂದ ತೀರ್ಥ ಸೇವಿಸಿ ವ್ಯಕ್ತಿಯೊಬ್ಬರು ಮೃತ ಪಟ್ಟಿರುವ ಘಟನೆ ಸೋಮವಾರ ಪೇಟೆಯಲ್ಲಿ ನಡೆದಿದೆ..,..

ಮಡಿಕೇರಿ: ದೇವಸ್ಥಾನದ ತೀರ್ಥದ ಹೆಸರಿನಲ್ಲಿ ಕೊರಿಯರ್ ಮೂಲಕ ಬಂದ ತೀರ್ಥ ಸೇವಿಸಿ ವ್ಯಕ್ತಿಯೊಬ್ಬರು ಮೃತ ಪಟ್ಟಿರುವ ಘಟನೆ ಸೋಮವಾರ ಪೇಟೆಯಲ್ಲಿ ನಡೆದಿದೆ.
ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ತಣ್ಣೀರುಹಳ್ಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹೋಟೆಲೊಂದರಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಸುರೇಶ್ 
ಮೃತ ವ್ಯಕ್ತಿ.
ಸುರೇಶ್ ಅವರ ಮನೆಗೆ  ಕೊರಿಯರ್ ನಲ್ಲಿ ಪಾರ್ಸೆಲ್ ಒಂದು ಬಂದಿದೆ. ಅದನ್ನು ಅವರ ಪತ್ನಿ ಪಡೆದುಕೊಂಡಿದ್ದು, ಬಳಿಕ ಪತಿಗೆ ನೀಡಿದಾಗ ಕಾಸರಗೋಡು ವಿಷ್ಣುಮೂರ್ತಿ ಮಂತ್ರ ದೇವಾಲಯದಿಂದ ತೀರ್ಥ ಬಂದಿರುವುದಾಗಿ ಹೇಳಿದ್ದಾರೆ.
ನಂತರ ಪೂಜೆ ಮಾಡಿ ಅದನ್ನು ಸುರೇಷ್ ಸೇವಿಸಿದ್ದಾರೆ. ಕೂಡಲೇ ಬಾಯಿಂದ ರಕ್ತ ಬರಲು ಆರಂಭಿಸಿದೆ. ಕೂಡಲೇ ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಆದರೆ ಅಷ್ಟರಲ್ಲಾಗಲೇ ಅವರು ಸಾವನ್ನಪ್ಪಿದ್ದರು, ಮೃತದೇಹವನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.
ಈ ಸಂಬಂಧ ಸುರೇಶ್ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ. ಮಡಿಕೇರಿ ಆಸ್ಪತ್ರೆಯಲ್ಲಿ ಸುರೇಶ್ ಅವರ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಹತ್ಯೆ ಮಾಡುವ ಉದ್ದೇಶದಿಂದಲೇ ವಿಷಪೂರಿತ ದ್ರಾವಣವನ್ನು ಕೊರಿಯರ್ ಮೂಲಕ ಕಳುಹಿಸಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಬಂದ ಬಳಿಕ ಸತ್ಯಾಂಶ ತಿಳಿದುಬರಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT