ಇತ್ತೀಚೆಗೆ ವಿಧಾನಸೌಧದ ಸರ್ಕಾರಿ ಕಚೇರಿಗೆ ದಿಢೀರ್ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ 
ರಾಜ್ಯ

ಕಚೇರಿಗೆ ತಡವಾಗಿ ಬಂದರೆ ಹುಷಾರ್; ನೌಕರರಿಗೆ ದಂಡ ಹಾಕಲಿದೆ ಸರ್ಕಾರ!

ರಾಜ್ಯ ಸರ್ಕಾರ ಸದ್ಯದಲ್ಲಿಯೇ ದೆಹಲಿ ಸರ್ಕಾರದ ನಿಯಮ ಪಾಲಿಸಲಿದೆ. ಇನ್ನು ಮುಂದೆ ಕಚೇರಿಗೆ ತಡವಾಗಿ ಬರುವ ನೌಕರರಿಗೆ ದಂಡ ವಿಧಿಸಲಾಗುತ್ತದೆ. ಸರ್ಕಾರಿ ...

ಬೆಂಗಳೂರು: ರಾಜ್ಯ ಸರ್ಕಾರ ಸದ್ಯದಲ್ಲಿಯೇ ದೆಹಲಿ ಸರ್ಕಾರದ ನಿಯಮ ಪಾಲಿಸಲಿದೆ. ಇನ್ನು ಮುಂದೆ ಕಚೇರಿಗೆ ತಡವಾಗಿ ಬರುವ ನೌಕರರಿಗೆ ದಂಡ ವಿಧಿಸಲಾಗುತ್ತದೆ. ನೌಕರರು ನಿಗದಿತ ಸಮಯಕ್ಕೆ ಕಚೇರಿಗೆ ಹಾಜರಾಗಬೇಕು ಎಂದು ಕಡ್ಡಾಯ ಮಾಡಲಾಗಿದೆ.
ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ(ಬಿಡಿಎ) ಆಯುಕ್ತ ಜಿ ಕೆ ಪ್ರಕಾಶ್ ಈ ನಿಟ್ಟಿನಲ್ಲಿ ಮೊದಲ ಹೆಜ್ಜೆ ತೆಗೆದುಕೊಂಡಿದ್ದಾರೆ. ಅವರು ಅಧಿಕಾರ ವಹಿಸಿಕೊಂಡ ಮರುದಿನವೇ ಬಿಡಿಎ ಕೇಂದ್ರ ಕಚೇರಿಗೆ ಆಗಮಿಸಿ ನೌಕರರೆಲ್ಲ ಬಂದಿದ್ದಾರೆಯೇ ಎಂದು ತಪಾಸಣೆ ಮಾಡಿದರು. ಎಂಜಿನಿಯರ್ ಮತ್ತು ಕಾರ್ಯದರ್ಶಿಗಳು ಬೆಳಗ್ಗೆ 10.30ಕ್ಕೆ ಆಗಮಿಸಿದ್ದರೆ ಕಚೇರಿಯ ಇತರ ಸಿಬ್ಬಂದಿ ಅಲ್ಲಿ ಉಪಸ್ಥಿತರಿರಲಿಲ್ಲ.
ಇದಕ್ಕೆ ಶಿಸ್ತುಕ್ರಮಕ್ಕೆ ಮುಂದಾದ ಅವರು ಸಿಬ್ಬಂದಿ ಕಚೇರಿಗೆ ಬರುವಾಗ ಮತ್ತು ಹೋಗುವಾಗ ಪಂಚಿಂಗ್ ಮಾಡಿ ಹೋಗಲು ಬಯೋಮೆಟ್ರಿಕ್ ಮೆಷಿನ್ ನ್ನು ಜಾರಿಗೆ ತರುವಂತೆ ಆದೇಶ ಹೊರಡಿಸಿದ್ದಾರೆ. ಅಧಿಕಾರಿಗಳು, ಸಿಬ್ಬಂದಿ, ಅಪರಿಚಿತರು ಕಚೇರಿಗೆ ಬಂದು ಹೋಗುವುದರ ಮೇಲೆ ಗಮನ ಹರಿಸಲು ಸಿಸಿಟಿವಿ ಕ್ಯಾಮರಾಗಳನ್ನು ನಿಯೋಜಿಸಲು ಕೂಡ ಆದೇಶ ನೀಡಿದ್ದಾರೆ.
ಸರ್ಕಾರಿ ಕಚೇರಿಗೆ ತಡವಾಗಿ ಕೆಲಸಕ್ಕೆ ಬರುವವರ ಮೇಲೆ ಶಿಸ್ತುಕ್ರಮ ಕೈಗೊಳ್ಳಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಆದೇಶ ಹೊರಡಿಸಿದ್ದರು. ಅದನ್ನು ಕರ್ನಾಟಕದಲ್ಲಿ ಇದೀಗ ಬಿಜೆಪಿ ಸರ್ಕಾರ ಜಾರಿಗೆ ತರಲು ಮುಂದಾಗಿದೆ. ಕೇಂದ್ರ ಸರ್ಕಾರದ ಈ ಕಟ್ಟುನಿಟ್ಟಿನ ಆದೇಶದ ಪರಿಣಾಮ ಬ್ಯಾಂಕ್, ಅಂಚೆ ಕಚೇರಿ ಮತ್ತು ಇತರ ಸರ್ಕಾರಿ ಕಚೇರಿಗಳಲ್ಲಿ ನೋಡಬಹುದಾಗಿದೆ. 
ಕಚೇರಿ ಕೆಲಸಕ್ಕೆ ಬರುವ ಸಾರ್ವಜನಿಕರು ಸರ್ಕಾರಿ ಕಚೇರಿಯಲ್ಲಿ ತಮ್ಮ ಕೆಲಸ ಮಾಡಿಸಿಕೊಳ್ಳಲು ಗಂಟೆಗಟ್ಟಲೆ ಕಾಯಬೇಕಾಗುತ್ತದೆ. ಈ ನಿಟ್ಟಿನಲ್ಲಿ ಹಲವು ಬಾರಿ ದೂರು ಬಂದಿರುವ ಹಿನ್ನಲೆಯಲ್ಲಿ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ. 
ಕೆಲವೊಮ್ಮೆ ಸರ್ಕಾರಿ ಕಚೇರಿಯಲ್ಲಿ ಸಿಬ್ಬಂದಿ ರಿಜಿಸ್ಟರ್ ದಾಖಲಾತಿ ಪುಸ್ತಕದಲ್ಲಿ ಹಾಜರಾತಿ ಹಾಕಿರುತ್ತಾರೆ, ಆದರೆ ಕುರ್ಚಿ ಮೇಲೆ ಉಪಸ್ಥಿತರಿರುವುದಿಲ್ಲ. ಇವುಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಸಹ ರಾಜ್ಯ ಸರ್ಕಾರ ಮುಂದಾಗಿದೆ. ಕೇವಲ ಬೆಂಗಳೂರು ಮಾತ್ರವಲ್ಲದೆ ಜಿಲ್ಲಾ ಕೇಂದ್ರಗಳಲ್ಲಿ ಸರ್ಕಾರಿ ಕಚೇರಿ ನೌಕರರ ಮೇಲೆ ಹದ್ದಿನ ಕಣ್ಣಿರಿಸಲು ರಾಜ್ಯ ಸರ್ಕಾರ ಮುಂದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT