ರಾಜ್ಯ

ಬೆಳಗಾವಿ: ಪ್ರವಾಹದಲ್ಲಿ ಕೊಚ್ಚಿಹೋದ ಶಾಲಾ ಬಾಲಕಿ, ಸಾವಿನ ಸಂಖ್ಯೆ 8ಕ್ಕೆ ಏರಿಕೆ

Lingaraj Badiger
ಬೆಳಗಾವಿ: ಶಾಲಾ ಬಾಲಕಿಯೊಬ್ಬಳು ಗುರುವಾರ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದು, ಪ್ರವಾಹಕ್ಕೆ ಸಿಲುಕಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.
ಪ್ರವಾಹದಲ್ಲಿ ಕೊಚ್ಚಿ ಹೋದ ಬಾಲಕಿಯನ್ನು ನಾಗರ ಮುನ್ನೋಳಿ ಗ್ರಾಮದ ಶಿಲ್ಪಾ(12) ಸಿದ್ದಪ್ಪ ಮನಗುಳಿ ಎಂದು ಗುರುತಿಸಲಾಗಿದೆ. 
ಸೇತುವೆ ದಾಟುವಾಗ ನೀರಿನ ರಭಸಕ್ಕೆ ಸಿಲುಕಿ ಬಾಲಕಿ ಕೊಚ್ಚಿ ಹೋಗಿ ಮೃತಪಟ್ಟಿದ್ಧಾಳೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ನಾರಮುನ್ನೋಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಭಾರೀ ಮಳೆಗೆ ಗೋಡೆ ಕುಸಿದು ಮನೆಯಲ್ಲಿ ಮಲಗಿದ್ದ ವೃದ್ಧ ಸಾವನ್ನಪ್ಪಿದ್ದಾನೆ. ಬೆಳಗಾವಿಯ ಮದಿಹಳ್ಳಿ ಗ್ರಾಮದ ಬಾಳಪ್ಪಾ ಕಬ್ಬೂರಿ (75) ಮೃತ ವ್ಯಕ್ತಿ.
ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ. ಅಲ್ಲದೆ ಪ್ರವಾಸ ಸಂತ್ರಸ್ತರಿಗೆ ಸರ್ಕಾರದಿಂದ ಸಕಲ ಸೌಲಭ್ಯ ನೀಡಲಾಗುತ್ತದೆ. ಯಾರೂ ಹೆದರುವ ಅವಶ್ಯಕತೆಯಿಲ್ಲ ಎಂದು ಧೈರ್ಯ ಸಿಎಂ ಹೇಳಿದ್ದಾರೆ.
SCROLL FOR NEXT