ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 
ರಾಜ್ಯ

ಕೊಯ್ನಾ ಜಲಾಶಯದ ನೀರಿನ ಸಂಬಂಧ ಮಹಾರಾಷ್ಟ್ರ ಮುಖ್ಯಮಂತ್ರಿ ಜೊತೆಗೆ ಮಾತುಕತೆ- ಯಡಿಯೂರಪ್ಪ

ಪ್ರವಾಹ ಪೀಡಿತ ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆಗೆ ಸರ್ಕಾರ ಮೊದಲ ಆದ್ಯತೆ ನೀಡಿದೆ ಎಂದರು.

ಬೆಳಗಾವಿ: ಪ್ರವಾಹ ಪೀಡಿತ ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಕ್ಷಣೆ ಹಾಗೂ ಪರಿಹಾರ  ಕಾರ್ಯಾಚರಣೆಗೆ ಸರ್ಕಾರ ಮೊದಲ ಆದ್ಯತೆ ನೀಡಿದೆ ಎಂದರು.
ನೆರೆಯ ರಾಜ್ಯದ ಕೊಯ್ನಾ ಜಲಾಶಯದಿಂದ ಹೆಚ್ಚುವರಿ ನೀರನ್ನು ಹರಿಸದಂತೆ ತಡೆಯಲು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಜೊತೆಗೆ ಮಾತುಕತೆ ನಡೆಸಲಾಗುವುದು ಎಂದು ತಿಳಿಸಿದರು.
ಕಳೆದ ವರ್ಷ ಫಡ್ನವೀಸ್ ಪ್ರಸ್ತಾಪಿಸಿದ ನೀರು ಹಂಚಿಕೆ ಒಪ್ಪಂದ ಕುರಿತ ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೆ ನೀಡದ ಯಡಿಯೂರಪ್ಪ, ಜಲಾಶಯಗಳಿಂದ ಹೊರಬರುವ ನೀರಿನಿಂದ ಉಭಯ ರಾಜ್ಯಗಳಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಮಾಹಾರಾಷ್ಟ್ರದ ಮುಖ್ಯಮಂತ್ರಿ ಜೊತೆಗೆ ಮಾತುಕತೆ ನಡೆಸಲಾಗುವುದು ಎಂದು ಅವರು ಹೇಳಿದರು.
ಮಳೆ ಹೆಚ್ಚಾದ ಸಂದರ್ಭದಲ್ಲಿ ನೀರಿನ ಬಿಡುಗಡೆ ಬಗ್ಗೆ ಉಭಯ ರಾಜ್ಯಗಳ ನಡುವೆ ಸಹಕಾರ ಮೂಡಬೇಕಾಗಿದೆ. ಈ ನಿಟ್ಟಿನಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗುವುದು ಎಂದು ಅವರು ತಿಳಿಸಿದರು.
ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯಗಳ ಹಿನ್ನೀರಿನಿಂದ ಮಹಾರಾಷ್ಟ್ರದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ ಎಂಬುದು ಸರಿಯಲ್ಲ ಎಂದು ಯಡಿಯೂರಪ್ಪ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT