ರಾಜ್ಯ

ನೆರವಿಗೆ ಧಾವಿಸಿದ ದತ್ತಿ ಇಲಾಖೆ, ಪ್ರವಾಹ ಸಂತ್ರಸ್ತರಿಗೆ ದೇಗುಲದ ಹರಕೆ ವಸ್ತ್ರಗಳ ವಿತರಣೆ!

ಭಾರಿ ಮಳೆ ಮತ್ತು ಭೀಕರ ಪ್ರವಾಹದಿಂದಾಗಿ ತತ್ತರಿಸಿ ಹೋಗಿರುವ ಕರ್ನಾಟಕದ ಜನತೆಯ ನೆರವಿಗೆ ರಾಜ್ಯ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ ಕೂಡ ಮುಂದಾಗಿದ್ದು...

ಬೆಂಗಳೂರು: ಭಾರಿ ಮಳೆ ಮತ್ತು ಭೀಕರ ಪ್ರವಾಹದಿಂದಾಗಿ ತತ್ತರಿಸಿ ಹೋಗಿರುವ ಕರ್ನಾಟಕದ ಜನತೆಯ ನೆರವಿಗೆ ರಾಜ್ಯ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ ಕೂಡ ಮುಂದಾಗಿದ್ದು, ಪ್ರವಾಹ ಸಂತ್ರಸ್ತರಿಗೆ ದೇಗುಲದ ಹರಕೆ ವಸ್ತ್ರಗಳ ವಿತರಣೆ ಮಾಡುವಂತೆ ಅಧಿಕಾರಿಗಳಿಗೆ ಆದೇಶ ನೀಡಿದೆ.

ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳ ಸಂತ್ರಸ್ತರಿಗೆ ಆಯಾ ಜಿಲ್ಲೆಯ ದೇವಾಲಯಗಳಿಗೆ ಹರಕೆ ರೂಪದಲ್ಲಿ ಸಲ್ಲಿಕೆಯಾಗಿರುವ ಸೀರೆ ಮತ್ತಿತರರ ವಸ್ತ್ರಗಳನ್ನು ವಿತರಿಸುವಂತೆ ಧಾರ್ಮಿಕ ದತ್ತಿ ಇಲಾಖೆ ಆದೇಶ ಹೊರಡಿಸಿದೆ. ಸತತ ಮಳೆ ಹಾಗೂ ನೆರೆ ಹಾವಳಿಯಿಂದ ರಾಜ್ಯದ ಅನೇಕ ಜಿಲ್ಲೆಗಳ ಬಹುತೇಕ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡು, ಹೊರಜಗತ್ತಿನಿಂದ ಸಂಪರ್ಕ ಕಡಿದುಕೊಂಡಿರುವುದರಿಂದ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಅದರಲ್ಲೂ ಬೆಳಗಾವಿ ಜಿಲ್ಲೆಯಲ್ಲಿ ಅತಿ ಹೆಚ್ಚು ಹಾನಿಯಾಗಿದೆ. ಆದ್ದರಿಂದ ಅನೇಕ ಪ್ರಮುಖ ದೇವಾಲಯಗಳು ಹರಕೆ ರೂಪದಲ್ಲಿ ಭಕ್ತಾದಿಗಳಿಂದ ಸಲ್ಲಿಕೆಯಾಗಿರುವ ವಸ್ತ್ರಗಳನ್ನು ಸಂತ್ರಸ್ತರಿಗೆ ವಿತರಿಸಲು ಮುಂದೆ ಬಂದಿವೆ ಎಂದು ಇಲಾಖೆ ತಿಳಿಸಿವೆ.

ಇದಕ್ಕಾಗಿ ಸಂಬಂಧ ಪಟ್ಟ ಅಧಿಕಾರಿಗಳಿಗೆ ಇಲಾಖೆ ಆದೇಶ ನೀಡಲಾಗಿದ್ದು, ದತ್ತಿ ಇಲಾಖೆ ಅಡಿಯಲ್ಲಿ ಬರುವ ಎಲ್ಲ ಪ್ರಮುಖ ದೇಗುಲಗಳಲ್ಲಿ ಹರಕೆ ರೂಪದಲ್ಲಿ ಸಂಗ್ರಹವಾಗಿರುವ ವಸ್ತ್ರಗಳು ಮತ್ತು ಇತರೆ ನಿತ್ಯ ಬಳಕೆಯ ವಸ್ತುಗಳನ್ನು ಸಂತ್ರಸ್ಥರಿಗೆ ವಿತರಿಸುವಂತೆ ಆದೇಶ ನೀಡಿದೆ. ದತ್ತಿ ಇಲಾಖೆಯ ಈ ಆದೇಶ ಇತರೆ ಇಲಾಖೆಗಳು ಮಾತ್ರವಲ್ಲದೇ ರಾಜ್ಯದ ಜನರಿಗೂ ಪ್ರವಾಹ ಸಂತ್ರಸ್ಥರಿಗೆ ನೆರವಾಗುವ ಕುರಿತು ಸ್ಪೂರ್ತಿ ನೀಡಿದಂತಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT