ರಾಜ್ಯ

ಪ್ರವಾಹಕ್ಕೆ 12 ಬಲಿ; ರಾಷ್ಟ್ರೀಯ ವಿಪತ್ತು ಸ್ಥಿತಿ ಎಂದು ಘೋಷಿಸಲು ಪ್ರಧಾನಿಗೆ ದೇವೇಗೌಡರ ಆಗ್ರಹ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಎದುರಾಗಿರುವ ಜಲಸಂಕಷ್ಟವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ಪರಿಹಾರ ಹಾಗೂ ಪುನರ್ವಸತಿಗೆ ...

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಎದುರಾಗಿರುವ ಜಲಸಂಕಷ್ಟವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ಪರಿಹಾರ ಹಾಗೂ ಪುನರ್ವಸತಿಗೆ ನೆರವು ನೀಡಬೇಕೆಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಆಗ್ರಹಿಸಿದ್ದಾರೆ.

The flood situation in Karnataka has worsened.
I strongly urge @PMOIndia to declare the floods in Karnataka as National disaster of severe nature and extend additional support at the earliest.@narendramodi #KarnatakaFlood

— H D Devegowda (@H_D_Devegowda) August 9, 2019

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಇದು ಅತ್ಯಂತ ಭಯಾನಕ ಜಲಸಂಕಷ್ಟವಾಗಿದ್ದು, ಕರ್ನಾಟಕದ ಬಹುತೇಕ ಜಿಲ್ಲೆಗಳು ತೊಂದರೆಗೊಳಗಾಗಿವೆ. ಈ ಸ್ಥಿತಿಯಲ್ಲಿ ತೊಂದರೆಗೊಳಗಾಗಿರುವ ಜನ, ಜಾನುವಾರಗಳ ರಕ್ಷ ಣೆಗೆ ಸಮರೋಪಾದಿಯಲ್ಲಿ ಕೆಲಸ ನಡೆಯಬೇಕಾಗಿದೆ. ಅದಕ್ಕಾಗಿ ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು ಹೇಳಿದ್ದಾರೆ.

ಕೃಷ್ಣಾ ನದಿಗೆ ಪ್ರವಾಹ ಆತಂಕ ಮೂಡಿಸಿದೆ. ಅತ್ಯಂತ ಸಣ್ಣ ನದಿ ಪಾತ್ರ ಹೊಂದಿರುವ ಮಲಪ್ರಭೆಯಲ್ಲಿ 1 ಲಕ್ಷ ಕ್ಯೂಸೆಕ್‌ ನೀರು ಬಂದಿದೆ.   ಮಳೆ ಪ್ರವಾಹದಿಂದಾಗಿ ಇದುವರೆಗೂ ಸುಮಾರು 12 ಮಂದಿ ಪ್ರಾ ಣ ಕಳೆದು ಕೊಂಡಿದ್ದಾರೆ ಎಂದು ಬಾಗಲಕೋಟೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದಾರೆ.

ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರು ಪರಿಹಾರವನ್ನು ಸಿಎಂ ಘೋಷಿಸಿದ್ದಾರೆ,  ಪ್ರವಾಹ ಪರಿಹಾರ ಕಾರ್ಯಗಳಿಗೆ ತಕ್ಷಣವೇ  100 ಕೋಟಿ ರು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ. 

ಕೊಡಗು ಜಿಲ್ಲೆಯ ಭಾಗಮಂಡಲದ ಕೂರಂಗಾಲ ಗುಡ್ಡಗಾಡು ಪ್ರದೇಶದಲ್ಲಿ  ಗುಡ್ಡ ಕುಸಿತದಿಂದಾಗಿ ಒಂದೇ ಕುಟುಂಬದ ನಾಲ್ಕು ಮಂದಿ ಸಾವನ್ನಪ್ಪಿದ್ದು, ಒಬ್ಬರು ಕಾಣೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಪ್ರವಾಹಕ್ಕೆ ಆರು ಮಂದಿ ಬಲಿಯಾಗದ್ದಾರೆ ಬೆಳಗಾವಿಯಲ್ಲಿರುವ 4,019 ಸರ್ಕಾರಿ ಕಟ್ಟಡಗಳಿಗೆ ಹಾನಿಯಾಗಿದೆ .

For any flood related emergencies and rescue work please contact the given control room numbers.#KarnatakaFloodspic.twitter.com/I51Fx3Zq5f

— CM of Karnataka (@CMofKarnataka) August 7, 2019

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT