ರಾಜ್ಯ

ಸರ್ಕಾರ, ಸಂತ್ರಸ್ತರ ನೆರವಿಗೆ ನಿಲ್ಲುವೆ : ಹೆಚ್.ಡಿ.ಕುಮಾರಸ್ವಾಮಿ

ರಾಜ್ಯ ಸರ್ಕಾರ ಪ್ರವಾಹ ಪರಿಸ್ಥಿತಿ ನಿಭಾಯಿಸುವಲ್ಲಿ ತನ್ನ ಪಾಲಿನ ಕೆಲಸ ಮಾಡುತ್ತಿದೆ. ಇಂತಹ ಸಂದರ್ಭದಲ್ಲಿ ನಾನು ರಾಜಕೀಯ ಮಾಡುವುದಿಲ್ಲ. ಕೇಂದ್ರ ಸರ್ಕಾರ ಅನುದಾನ ಹಂಚಿಕೆ,ನೆರವು ನೀಡುವಲ್ಲಿ ಯಾವುದೇ ತಾರತಮ್ಯ ಮಾಡಬಾರದು. 

ಬೆಳಗಾವಿ: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನೆರೆಪೀಡಿತ ಪ್ರದೇಶಗಳಲ್ಲಿ ಪ್ರವಾಸ ಆರಂಭಿಸಿದ್ದಾರೆ.

ಶನಿವಾರ ಬೆಳಿಗ್ಗೆ ಬೆಳಗಾವಿಗೆ ಆಗಮಿಸಿದ ಕುಮಾರಸ್ವಾಮಿ ಅಧಿಕಾರಿಗಳಿಂದ ಪ್ರವಾಹ ಪರಿಸ್ಥಿತಿ ಹಾಗೂ ಪರಿಹಾರ ಕಾರ್ಯಗಳ ಕುರಿತು ಮಾಹಿತಿ ಪಡೆದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹದಿಂದ ಜಿಲ್ಲೆಯಲ್ಲಿ ಭಾರೀ ಹಾನಿಯುಂಟಾಗಿದೆ. ಪ್ರವಾಹ ಸಂತ್ರಸ್ತರಿಗೆ ನೆರವು ‌ನೀಡಲು ಅಗತ್ಯ ಕ್ರಮ ಕೈಗೊಳ್ಳುತ್ತೇನೆ. ಮಧುರೈ ಯಿಂದ 10 ಸಾವಿರ ಹೊದಿಕೆಗಳನ್ನು ತರಿಸಿ ಸಂತ್ರಸ್ತರಿಗೆ ‌ನೀಡಲಾಗುವುದು ಎಂದರು.

ರಾಜ್ಯ ಸರ್ಕಾರ ಪ್ರವಾಹ ಪರಿಸ್ಥಿತಿ ನಿಭಾಯಿಸುವಲ್ಲಿ ತನ್ನ ಪಾಲಿನ ಕೆಲಸ ಮಾಡುತ್ತಿದೆ. ಇಂತಹ ಸಂದರ್ಭದಲ್ಲಿ ನಾನು ರಾಜಕೀಯ ಮಾಡುವುದಿಲ್ಲ. ಕೇಂದ್ರ ಸರ್ಕಾರ ಅನುದಾನ ಹಂಚಿಕೆ,ನೆರವು ನೀಡುವಲ್ಲಿ ಯಾವುದೇ ತಾರತಮ್ಯ ಮಾಡಬಾರದು. 

ರಾಜ್ಯದ ಜನರ ಸಂಕಷ್ಟಗಳಿಗೆ ಎಲ್ಲಾ ರೀತಿಯಲ್ಲೂ ನೆರವಾಗಬೇಕು. ಮೂರು ದಿನಗಳಿಂದ ಅನಾರೋಗ್ಯ ತಮ್ಮ ನ್ನು ಬಾಧಿಸಿದ್ದು, ಹೀಗಾಗಿ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಸಾಧ್ಯವಾಗಿರಲಿಲ್ಲ. ನೆರೆಹಾವಳಿ ಪ್ರದೇಶಗಳಿಗೆ ತಡವಾಗಿ ಭೇಟಿ ನೀಡಿದ್ದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅವಶ್ಯಕತೆಯಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಿಮ್ಮಾಪುರ ರಾಜೀನಾಮೆಗೆ ವಿಪಕ್ಷಗಳ ಪಟ್ಟು: ಬಿಜೆಪಿ, ಜೆಡಿಎಸ್ ನಿಂದ ಸದನದಲ್ಲಿ ಅಹೋರಾತ್ರಿ ಧರಣಿ

2026ರ ಐಪಿಎಲ್ ಗಾಗಿ RCB ಜೆರ್ಸಿ ಅನಾವರಣ; ಹೊಸ ಋತುವಿಗೆ ವಿಶಿಷ್ಟ ಲೋಗೋ, ಸ್ಟಾರ್ ಪ್ರತ್ಯಕ್ಷ!

Rottweiler ನಾಯಿ ದಾಳಿ: ಬರೊಬ್ಬರಿ 8 ಗಂಟೆ ಶಸ್ತ್ರಚಿಕಿತ್ಸೆ, 80 ಹೊಲಿಗೆ... ಕೊನೆಗೂ ಮಾಲೀಕ ಅರೆಸ್ಟ್! Video

ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದ ಶ್ಲಾಘಿಸಿದ ಪಿಯೂಷ್ ಗೋಯಲ್; ಭಾರತದ ಉಜ್ವಲ ಭವಿಷ್ಯಕ್ಕೆ ಇದು ಶುಭ ಸೂಚನೆ

Indian Stock Market: 2ನೇ ದಿನವೂ ಮಹಾ ಏರಿಕೆ; ಕೇವಲ 15 ನಿಮಿಷದಲ್ಲಿ ಹೂಡಿಕೆದಾರರ ಸಂಪತ್ತು 13 ಲಕ್ಷ ಕೋಟಿ ರೂ ವೃದ್ಧಿ!

SCROLL FOR NEXT