ರಾಜ್ಯ

ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ವಿರುದ್ಧ ಗ್ರಾಮಸ್ಥರ ಆಕ್ರೋಶ

ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಹಾಗೂ ಬೆಂಬಲಿಗರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡ ಘಟನೆ ಭಾನುವಾರ ಜರುಗಿದೆ.

ಕೊಡಗು: ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಹಾಗೂ ಬೆಂಬಲಿಗರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡ ಘಟನೆ ಭಾನುವಾರ ಜರುಗಿದೆ.

ಕೊಡಗಿನಲ್ಲಿ ಪ್ರವಾಹಪೀಡಿತರಿಗೆ ಶಾಸಕರಾದ ಅಪ್ಪಚ್ಚು ರಂಜನ್ ಸರಿಯಾದ ರೀತಿಯಲ್ಲಿ ಸಹಕರಿಸುತ್ತಿಲ್ಲ. ಸಹಾಯ ನೀಡಲು ಶ್ರೀಮಂತ ಬಡವ ಎಂಬ ಬೇಧಭಾವ ಮಾಡುತ್ತಿದ್ದಾರೆ ಎಂದು ಆರೋಪಿಸಿ ಗುಡ್ಡೆಹೊಸೂರು ತೆಪ್ಪದಗಕಂಡಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಶನಿವಾರ ಕಾವೇರಿ ನೀರಿನ ರಭಸಕ್ಕೆ ತೆಪ್ಪದಕಂಡಿ ಗ್ರಾಮದಲ್ಲಿ 4 ಮನೆಗಳು ಕುಸಿದು ಬಿದ್ದಿದ್ದು, ಮನೆ ಸಾಮಾಗ್ರಿಗಳನ್ನು ಜನರನ್ನು ತೆರವುಗೊಳಿಸಲು ಶಾಸಕರಾಗಲೀ ಅಥವಾ ಅವರ ಕಡೆಯವರಾಗಲೀ ಆಗಮಿಸಿರಲಿಲ್ಲ. ಯಾರ ನೆರವು ಇಲ್ಲದೇ ಇದ್ದುದ್ದರಿಂದ ಗ್ರಾಮಸ್ಥರೇ ಸಾಮಾಗ್ರಿಗಳನ್ನೆಲ್ಲ ತೆರವುಗೊಳಿಸಿದ್ದರು. ಆದರೆ ಇಂದು ಎರಡು ಜೀಪ್ ನಲ್ಲಿ ಅಪ್ಪಚ್ಚು ರಂಜನ್ ಭಾವಚಿತ್ರ ಅಂಟಿಸಿಕೊಂಡು ಅವರ ಬೆಂಬಲಿಗರು ತೆಪ್ಪದಕಂಡಿ ಗ್ರಾಮಕ್ಕೆ ಆಗಮಿಸಿದ್ದನ್ನು ಕಂಡ ಗ್ರಾಮಸ್ಥರು  ಅವರನ್ನು  ತೀವ್ರ ತರಾಟೆಗೆ ತೆಗೆದುಕೊಂಡು, ಶಾಸಕರ ವಿರುದ್ಧ ಧಿಕ್ಕಾರ ಕೂಗಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!