ಪೇಜಾವರ ಶ್ರೀಗಳು 
ರಾಜ್ಯ

ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ: ಪೇಜಾವರ ಶ್ರೀಗಳಿಂದ 15 ಲಕ್ಷ ರು. ನೆರವು ಘೋಷಣೆ

ರಾಜ್ಯದ ಪ್ರವಾಹ ಪರಿಸ್ಥಿತಿ ದಿನದಿನಕ್ಕೆ ಬಿಗಡಾಯಿಸುತ್ತಿದೆ, ಜನತೆ ಕಷ್ಟದಲ್ಲಿದೆ. ಇದಕ್ಕಾಗಿ ಮಠದಿಂಡ ಹದಿನೈದು ಲಕ್ಷ  ರು. ನೆರವು ನೀಡುವುದಾಗಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ್ವರತೀರ್ಥ ಸ್ವಾಮೀಜಿ  ಘೋಷಿಸಿದ್ದಾರೆ. 

ಮೈಸೂರು: ರಾಜ್ಯದ ಪ್ರವಾಹ ಪರಿಸ್ಥಿತಿ ದಿನದಿನಕ್ಕೆ ಬಿಗಡಾಯಿಸುತ್ತಿದೆ, ಜನತೆ ಕಷ್ಟದಲ್ಲಿದೆ. ಇದಕ್ಕಾಗಿ ಮಠದಿಂಡ ಹದಿನೈದು ಲಕ್ಷ  ರು. ನೆರವು ನೀಡುವುದಾಗಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ್ವರತೀರ್ಥ ಸ್ವಾಮೀಜಿ  ಘೋಷಿಸಿದ್ದಾರೆ.

ಮೈಸೂರಿನ ಸರಸ್ವತಿಪುರಂನ ಕೃಷ್ಣಧಾಮದಲ್ಲಿ  ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸ್ವಾಮೀಜಿ ರಾಜ್ಯದಲ್ಲಿ ನಾನಾ ಕಡೆ ನೆರೆ ಪರಿಸ್ಥಿತಿ ಉಂತಾಗಿದ್ದು ಜನರು ಸಂಕಷ್ಟದಲ್ಲಿದ್ದಾರೆ. ಹಾಗಾಗಿ ಸಾರ್ವಜನಿಕರು, ಭಕ್ತರು ಅವರ ಕಷ್ಟಗಳಿಗೆ ಸ್ಪಂದಿಸಿ ಎಂದು ಮನವಿ ಮಾಡಿದ್ದಾರೆ.

ಇದೀಗ ಚಾತುರ್ಮಾಸದ ಕಾರಣ ನೆರೆ ಪೀಡಿತ ಪ್ರದೇಶಗಳಿಗೆ ತೆರಳಲು ಸಾಧ್ಯವಾಗುತ್ತಿಲ್ಲ. ಆದರೆ ಮಠದ ಪದಾಧಿಕಾರಿಗಳನ್ನು ಇಲ್ಲಿಗೆ ಬರಹೇಳಿದ್ದು ಮುಂದೆ ಯಾವ ರೀತಿಯಲ್ಲಿ ಸಹಾಯ ನೀಡಬಹುದೆಂದು ತೀರ್ಮಾನಿಸುತ್ತೇನೆ. ಸದ್ಯ ಬೆಳಗಾವಿಯ ಒಂದು ಪ್ರದೇಶ ಆಯ್ಕೆ ಮಾಡಿಕೊಂಡು  ಪರಿಹಾರ ಕಾರ್ಯ ಕೈಗೊಳ್ಳಲಾಗುವುದು. ಯುವಕರು ಶ್ರಮದಾನದ ಮೂಲಕ  ಪರಿಸ್ಥಿತಿ ನಿಭಾಯಿಸಲು ಸಹಕರಿಸಬೇಕಿದೆ. ಚಾತುರ್ಮಾಸ ಮುಗಿದ ನಂತರ ಧಾರವಾಡ, ಹುಬ್ಬಳ್ಳಿ, ಬೆಳಗಾವಿಗಳಲ್ಲಿ ಪಾದಯಾತ್ರೆ ಕೈಗೊಳ್ಳಲಾಗುವುದು ಎಂದು ಶ್ರೀಗಳು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT