ರಾಜ್ಯ

ರಾಜ್ಯದಲ್ಲಿ ವರುಣನ ಆರ್ಭಟ: ಇಂದು ವಿತ್ತ ಸಚಿವೆ ಸೀತಾರಾಮನ್ ಭೇಟಿ

ರಾಜ್ಯದಲ್ಲಿ ಭೀಕರ ಮಳೆಯಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು ರಾಜ್ಯವು ಜಲ ಸಂಕಷ್ಟದಲ್ಲಿದೆ. ಈ ನಡುವೆ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಅವರು ಇಂದು  ಕರ್ನಾಟಕಕ್ಕೆ ಆಗಮಿಸಲಿದ್ದು....

ಬೆಂಗಳೂರು: ರಾಜ್ಯದಲ್ಲಿ ಭೀಕರ ಮಳೆಯಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು ರಾಜ್ಯವು ಜಲ ಸಂಕಷ್ಟದಲ್ಲಿದೆ. ಈ ನಡುವೆ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಅವರು ಇಂದು  ಕರ್ನಾಟಕಕ್ಕೆ ಆಗಮಿಸಲಿದ್ದು ಬೆಳಗಾವಿ, ಬಾಗಲಕೋಟೆ ಸೇರಿ ವಿವಿಧ ನೆರೆ ಸಂತ್ರಸ್ಥ ಜಿಲ್ಲೆಗಳಿಗೆ ಭೇಟಿ ಕೊಡಲಿದ್ದಾರೆ.

ಕರ್ನಾಟಕದಲ್ಲಿ 80,000 ಕ್ಕೂ ಹೆಚ್ಚು ಪ್ರವಾಹ ಪೀಡಿತ ಜನರನ್ನು ಸ್ಥಳಾಂತರಿಸಲಾಗಿದೆ. ರಾಜ್ಯದ ನೆರೆ ಪರಿಸ್ಥಿತಿಯಿಂದ ಇದುವರೆಗೆ 12 ಜನರು ಪ್ರಾಣ ಕಳೆದುಕೊಂಡಿದ್ದು ಸಿಎಂ ಯಡಿಯೂರಪ್ಪ  ಮೃತಪಟ್ಟ ಜನರ ರಕ್ತಸಂಬಂಧಿ ಗಳಿಗೆ  ಐದು ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಸೀತಾರಾಮನ್ ಅವರು ವೈಮಾನಿಕ ಸಮೀಕ್ಷೆ ಅಲ್ಲದೆ ರಸ್ತೆ ಮಾರ್ಗದ ಮೂಲಕ ಸಹ ನೆರೆ ಪೀಡಿತ ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ. 

ಪ್ರವಾಹ ಮತ್ತು ಮಳೆಯು ರಾಜ್ಯದ ಉತ್ತರ, ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಭಾರೀ ಹಾನಿಯನ್ನುಂಟು ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಂತ್ಯ ಸನ್ನಿಹಿತ?: ಇರಾನ್ ನತ್ತ ಮುಖ ಮಾಡಿದ ಅಮೆರಿಕದ ಅತ್ಯಂತ ವಿಧ್ವಂಸಕ ಕ್ಷಿಪಣಿ

Open The F*cking Strait, You Bast*rds: ಹತಾಶ ಅಮೆರಿಕ ಅಧ್ಯಕ್ಷರಿಂದ ಇರಾನ್ ಗೆ ಅಶ್ಲೀಲ ನಿಂದನೆ, ಬೈಗುಳ

IPL ಅನ್ನೂ ಮೀರಿಸಿ PSL 'ವಿಶ್ವದ ನಂಬರ್ ಒನ್ ಲೀಗ್' ಆಗುತ್ತದೆ: Mohsin Naqvi

ಟಿಕೆಟ್ ಆಕಾಂಕ್ಷಿಗಳಿಂದ 50 ಸಾವಿರ ಸಂಗ್ರಹ; ಚುನಾವಣೆಯಿಂದ MNM ಹಿಂದೆ ಸರಿದು ಮಹಾಮೋಸ: ಕಮಲ್ ಹಾಸನ್ ವಿರುದ್ಧ ಭುಗಿಲೆದ್ದ ಆಕ್ರೋಶ!

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ: ಹಿಂದೂ ಯುವತಿಯ ಹಲವು ವಿಡಿಯೋ ವೈರಲ್

SCROLL FOR NEXT