ಸಂಗ್ರಹ ಚಿತ್ರ 
ರಾಜ್ಯ

ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖಾಧಿಕಾರಿಗಳಿಗೆ 'ಗೃಹಮಂತ್ರಿ ಪದಕ'

ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಅತ್ಯುತ್ತಮವಾಗಿ ತನಿಖೆ ನಡೆಸಿದ ಕರ್ನಾಟಕದ ಪೊಲೀಸ್ ಅಧಿಕಾರಿಗಳು ಪ್ರತಿಷ್ಠಿತ ಕೇಂದ್ರ ಗೃಹಮಂತ್ರಿ ಪದಕ-2019ಕ್ಕೆ ಭಾಜನರಾಗಿದ್ದಾರೆ.

ಬೆಂಗಳೂರು:  ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಅತ್ಯುತ್ತಮವಾಗಿ ತನಿಖೆ ನಡೆಸಿದ ಕರ್ನಾಟಕದ ಪೊಲೀಸ್ ಅಧಿಕಾರಿಗಳು ಪ್ರತಿಷ್ಠಿತ ಕೇಂದ್ರ ಗೃಹಮಂತ್ರಿ ಪದಕ-2019ಕ್ಕೆ ಭಾಜನರಾಗಿದ್ದಾರೆ.

ಹೌದು.. ಕರ್ನಾಟಕದ 6 ಮಂದಿ ಪೋಲಿಸ್‌ ಅಧಿಕಾರಿಗಳಿಗೆ ಕೇಂದ್ರ ಗೃಹ ಮಂತ್ರಿ ಪದಕ ಪ್ರಶಸ್ತಿಗೆ ಪಾತ್ರವಾಗಿದ್ದು, ಈ ಪೈಕಿ ಗೌರಿ ಲಂಕೇಶ್‌ ಹತ್ಯೆ ಪ್ರಕರಣದಲ್ಲಿ ಅತ್ಯುತ್ತಮ ತನಿಖೆ ನಡೆಸಿದ್ದ ಹಿನ್ನಲೆಯಲ್ಲಿ ಐಪಿಎಸ್‌ ಅಧಿಕಾರಿಗಳಾದ ಎಂ.ಎನ್ ಅನುಚೇತನ್‌ ಹಾಗೂ ಡಿವೈಎಸ್‌ಪಿ ರಂಗಪ್ಪ. ಡಿವೈಎಸ್‌ಪಿ ರವಿಶಂಕರ್‌, ಎಸ್ಪಿ ಜಾಹ್ನವಿ ಸಿಪಿಐ ಸತೀಶ್‌ ಹಾಗೂ ಇನ್ಸಪೆಕ್ಟರ್‌ ರಾಜು ಅವರು ಪ್ರಶಸ್ತಿ ಪಡೆದುಕೊಂಡಿರುವ ಪೊಲೀಸ್‌ ಅಧಿಕಾರಿಗಳಾಗಿದ್ದಾರೆ.

ಇನ್ನು ದೇಶದ್ಯಾಂತ ವಿವಿಧ ರಾಜ್ಯಗಳ ಪೊಲೀಸ್ ಅಧಿಕಾರಿಗಳು ಈ ಪ್ರಶಸ್ತಿಗಳನ್ನು ಪಡೆದುಕೊಳ್ಳುತ್ತಿದ್ದು ಈ ಪೈಕಿ ನಮ್ಮ ರಾಜ್ಯ 6 ಮಂದಿ ಪೋಲಿಸ್‌ ಅಧಿಕಾರಿಗಳು ಗೌರವಕ್ಕೆ ಪಾತ್ರವಾಗಿದ್ದಾರೆ. ತನಿಖಾ ವಿಭಾಗದಲ್ಲಿ ಉತ್ತಮ ಕಾರ್ಯದಕ್ಷತೆ ತೋರಿದ ಹಿನ್ನೆಲೆಯಲ್ಲಿ ಆರು ಪೊಲೀಸ್‌ ಅಧಿಕಾರಿಗಳಿಗೆ ಪದಕ ಪ್ರಕಟಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT