ಕಾಂಗ್ರೆಸ್ ನಾಯಕರಿಂದ ಬಕ್ರೀದ್ ಬಾಡೂಟ 
ರಾಜ್ಯ

ಉತ್ತರ ಕರ್ನಾಟಕದಲ್ಲಿ ನೆರೆಯಿಂದ ಜನ ತತ್ತರ; ಇತ್ತ ಕಾಂಗ್ರೆಸ್ ನಾಯಕರಿಂದ ಬಕ್ರೀದ್ ಬಾಡೂಟ

ಪ್ರವಾಹ ಸಂತ್ರಸ್ಥರ ಸಂಕಷ್ಟ ಕೇಳಬೇಕಾದ ಕಾಂಗ್ರೆಸ್ ಪಕ್ಷದ ಘಟಾಮನುಘಟಿ ನಾಯಕರು ಪ್ರವಾಹದ ನಡುವೆಯೇ ಬಕ್ರಿದ್ ಹಬ್ಬದ ಬಾಡೂಟವನ್ನು ಹೊಟ್ಟೆ ತುಂಬ ಸವಿದಿದ್ದಾರೆ.

ಬೆಂಗಳೂರು: ಉತ್ತರ ಕರ್ನಾಟಕ, ಮಲೆನಾಡು, ಕರಾವಳಿ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿಯಿಂದ ಜನರು ಸಂಕಷ್ಟಕ್ಕೀಡಾಗಿ ತುತ್ತು ಅನ್ನಕ್ಕಾಗಿ ಕೈಚಾಚುವ ಪರಿಸ್ಥಿತಿ ಇದೆ.ಸಂಕಷ್ಟ ಕೇಳಬೇಕಾದ ಕಾಂಗ್ರೆಸ್ ಪಕ್ಷದ ಘಟಾಮನುಘಟಿ ನಾಯಕರು ಬಕ್ರಿದ್ ಹಬ್ಬದ ಬಾಡೂಟವನ್ನು ಹೊಟ್ಟೆ ತುಂಬ ಸವಿದಿದ್ದಾರೆ.

ನಾಡಿಗೆ ಅನ್ನನೀಡುವ ಅನ್ನದಾತ ನೆರೆಯಲ್ಲಿ ಸಿಲುಕು ಮನೆ ,ಆಸ್ತಿ ಬೆಳೆ ಬದುಕು ಎಲ್ಲವನ್ನು ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ.ಆದರೆ ಜನರ ಸಂಕಷ್ಟ ಕೇಳಬೇಕಾದ ಸಂಕಷ್ಟದ ಸಂರ್ಭದಲ್ಲಿ ಹಬ್ಬದ ಸಂಭ್ರಮದಲ್ಲಿ ತೊಡಗಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆಗೆ ಕಾರಣವಾಗಿದೆ.

ಇಂದು ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ  ವಿಧಾನ ಪರಿಷತ್ ಸದಸ್ಯ ನಜೀರ್ ಅಹ್ಮದ್ ಅವರು ಎಲ್ಲಾ ಕಾಂಗ್ರೆಸ್ ಪಕ್ಷದ ನಾಯಕರಿಗೆ ಆಹ್ವಾನವನ್ನು ನೀಡಿದ್ದು, ಹಬ್ಬದ ಸಂಭ್ರಮದಲ್ಲಿ ಭಾಗಹಿಸಿದ್ದ ನಾಯಕರು ಬಾಡೂಟ ಸವಿದಿದ್ದಾರೆ. 

ಉತ್ತರ ಕರ್ನಾಟಕದಲ್ಲಿ ನೆರೆ ಪರಿಸ್ಥಿತಿ ಇದ್ದರೂ ಕೂಡ ಜನರ ಸಮಸ್ಯೆಗೆ ಸ್ಪಂದಿಸಬೇಕಾಗಿದ್ದ ಆ ಭಾಗದ ನಾಯಕರೇ ಇಂದು ನಜೀರ್ ಅಹ್ಮದ್ ಅವರ ನಿವಾಸದಲ್ಲಿ ನಡೆದ ಹಬ್ಬದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಕೆಜೆ ಜಾರ್ಜ್, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಎಂಬಿ ಪಾಟೀಲ್, ಮಹದೇವ ಪ್ರಸಾದ್, ಜಮೀರ್ ಭೋಜನ ಕೂಟದಲ್ಲಿ ಭಾಗಿಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?