ತುಂಗಭದ್ರಾ ಜಲಾಶಯ 
ರಾಜ್ಯ

ತುಂಗಭದ್ರಾ ಜಲಾಶಯ ಒಡೆದಿಲ್ಲ: ಜಿಲ್ಲಾಧಿಕಾರಿ ಸುನೀಲ್‌ಕುಮಾರ್ ಸ್ಪಷ್ಟನೆ

ತುಂಗಭದ್ರಾ ಜಲಾಶಯ ಒಡೆದಿಲ್ಲ. ಗ್ರಾಮಸ್ಥರು ಆತಂಕಪಡುವ ಅಗತ್ಯವಿಲ್ಲ ಎಂದು ಕೊಪ್ಪಳ ಜಿಲ್ಲಾಧಿಕಾರಿ ಸುನೀಲ್ ಕುಮಾರ್ ಅವರು ಮಂಗಳವಾರ ಸ್ಪಷ್ಟಪಡಿಸಿದ್ದಾರೆ.

ಕೊಪ್ಪಳ: ತುಂಗಭದ್ರಾ ಜಲಾಶಯ ಒಡೆದಿಲ್ಲ. ಗ್ರಾಮಸ್ಥರು ಆತಂಕಪಡುವ ಅಗತ್ಯವಿಲ್ಲ ಎಂದು ಕೊಪ್ಪಳ ಜಿಲ್ಲಾಧಿಕಾರಿ ಸುನೀಲ್ ಕುಮಾರ್ ಅವರು ಮಂಗಳವಾರ ಸ್ಪಷ್ಟಪಡಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ  ಮಾತನಾಡಿದ ಅವರು, ತುಂಗಭದ್ರಾ ಜಲಾಶಯ ಒಡೆದಿಲ್ಲ. ತುಂಗಭದ್ರಾ ಎಡದಂಡೆ ಮುಖ್ಯಕಾಲುವೆ ಒಡೆದಿದ್ದರಿಂದ ಅಲ್ಪ ಪ್ರಮಾಣದ ನೀರು ಪೋಲಾಗುತ್ತಿದೆ. ಪಂಪಾವನ ಜಲಾಶಯದ ಪಕ್ಕದಲ್ಲಿರುವುದರಿಂದ ಜಲಾವೃತಗೊಂಡಿದೆ. ಜಲಾಶಯದ ಎಂಜನಿಯರ್ ಅದನ್ನು ಸರಿಪಡಿಸುತ್ತಾರೆ ಎಂದರು.

ಜಲಾಶಯ ಒಡೆದಿದೆ ಎನ್ನುವುದು ಶುದ್ಧ ಸುಳ್ಳು. ಈ ಬಗ್ಗೆ ಜನರು ತಂಕಕ್ಕೊಳಗಾಗಬಾರದು. 
ಸುತ್ತಮುತ್ತಲಿನ ಹಳ್ಳಿಗಳಲ್ಲಿ ಈಗಾಗಲೇ ಡಂಗೂರ ಸಾರಿ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು.

ಜಲಾಶಯ ಒಡೆದಿದೆ ಎಂಬ ವದಂತಿಯೊಂದು ಹಬ್ಬಿದ ಹಿನ್ನೆಲೆಯಲ್ಲಿ ನದಿ ತೀರದ ಬಂಡಿಹರ್ಲಾಪುರ, ಸಣಾಪುರ, ಹನುಮನಹಳ್ಳಿ, ಅಗಳಕೇರ, ಶಿವಪುರ ಗ್ರಾಮಸ್ಥರು ಆತಂಕ್ಕೀಡಾಗಿದ್ದರು. ಈ ಹಿನ್ನೆಲೆಯಲ್ಲಿ ಮಂಗಳವಾರ ಖಾಸಗಿ ಶಾಲಾ- ಕಾಲೇಜುಗಳಿಗೆ ದಿಢೀರ್ ರಜೆ ಘೋಷಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!