ರಾಜ್ಯ

ಯಾದಗಿರಿ: ಜೀವದ ಹಂಗು ತೊರೆದು ಪ್ರವಾಹದ ನಡುವೆ ಆ್ಯಂಬುಲೆನ್ಸ್‌ಗೆ ದಾರಿ ತೋರಿದ ಬಾಲಕ, ವಿಡಿಯೋ ವೈರಲ್!

Vishwanath S

ಯಾದಗಿರಿ: ಪ್ರವಾಹದ ನಡುವೆ ಸಿಲುಕಿಕೊಂಡಿದ್ದ ಆ್ಯಂಬುಲೆನ್ಸ್‌ಗೆ ಬಾಲಕನೊಬ್ಬ ಜೀವದ ಹಂಗು ತೊರೆದು ಉಕ್ಕಿ ಹರಿಯುತ್ತಿದ್ದ ನೀರಿನ ನಡುವೆ ನಡೆದುಕೊಂಡು ಬಂದು ದಾರಿ ತೋರಿಸಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ನೀರಿನಲ್ಲಿ ಮುಳುಗಡೆಯಾಗಿವೆ. ಮಲಪ್ರಭಾ, ಭೀಮಾ ಸೇರಿ ಕೃಷ್ಣಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕೃಷ್ಣಾ ನದಿಯ ಅಬ್ಬರಕ್ಕೆ ಯಾದಗಿರಿಯ ದೇವರ್ದುಗದ ಸೇತುವೆ ಮೇಲೆ ನೀರು ಉಕ್ಕಿ ಹರಿಯುತ್ತಿತ್ತು. 

ಈ ವೇಳೆ ಬಾಲಕನೊಬ್ಬ ಪ್ರವಾಹದ ನಡುವೆ ನಡೆದುಕೊಂಡು ಬಂದು ಆ್ಯಂಬುಲೆನ್ಸ್‌ಗೆ ದಾರಿ ತೋರಿಸಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

SCROLL FOR NEXT