ಹಾಸನ: ಬೈಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಮೃತಪಟ್ಟಿರುವ ಘಟನೆ ಹೊಳೆನರಸೀಪುರ ತಾಲೂಕಿನ ಸಿಗರನಹಳ್ಳಿ ಬಳಿ ಇಂದು ನಡೆದಿದೆ.
ಸಿಗರನಹಳ್ಳಿ ನಿವಾಸಿಗಳಾದ ಉಮೇಶ್(23) ಹಾಗೂ ಹರೀಶ್(22) ಮೃತಪಟ್ಟ ಯುವಕರು. ಹಾಸನ ನಗರದಿಂದ ಬೈಕ್ ನಲ್ಲಿ ಹೊಳೆನರಸೀಪುರ ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು, ಕಾರು ಚಾಲಕನಿಗೂ ಗಂಭೀರವಾಗಿ ಗಾಯವಾಗಿದೆ.
ಸುದ್ದಿ ತಿಳಿದ ತಕ್ಷಣ ಹೊಳೆನರಸೀಪುರ ನಗರ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.