ಸಂಗ್ರಹ ಚಿತ್ರ 
ರಾಜ್ಯ

ನೆರೆ ಇಳಿದರೂ ತಪ್ಪಿಲ್ಲ ಹೈ.ಕರ್ನಾಟಕ ಭಾಗದ ಜನರ ಗೋಳು, ಸಂತ್ರಸ್ಥರ ಅಳಲು ಕೇಳೋರ್ಯಾರು?

ಹೈದರಾಬಾದ್ ಕರ್ನಾಟಕದಲ್ಲಿ ನೆರೆ ಹಾವಳಿ ಕಡಿಮೆಯಾಗಿದ್ದು, ಬಸವಸಾಗರ ಜಲಾಶಯದ ನೀರಿನ ಒಳಹರಿವು ಇಳಿಮುಖವಾಗಿದೆಯಾದರೂ, ಯಾದಗಿರಿ, ರಾಯಚೂರು ಹಾಗೂ ಕಲಬುರಗಿ ಜಿಲ್ಲೆಗಳ ಬಹುತೇಕ ಪ್ರದೇಶಗಳು ಇನ್ನೂ ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿವೆ. 

ಕಲಬುರಗಿ:  ಹೈದರಾಬಾದ್ ಕರ್ನಾಟಕದಲ್ಲಿ ನೆರೆ ಹಾವಳಿ ಕಡಿಮೆಯಾಗಿದ್ದು, ಬಸವಸಾಗರ ಜಲಾಶಯದ ನೀರಿನ ಒಳಹರಿವು ಇಳಿಮುಖವಾಗಿದೆಯಾದರೂ, ಯಾದಗಿರಿ, ರಾಯಚೂರು ಹಾಗೂ ಕಲಬುರಗಿ ಜಿಲ್ಲೆಗಳ ಬಹುತೇಕ ಪ್ರದೇಶಗಳು ಇನ್ನೂ ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿವೆ.

ಯಾದಗಿರಿ ಹಾಗೂ ರಾಯಚೂರಿಗೆ ಸಂಪರ್ಕ ಕಲ್ಪಿಸುವ ಎರಡು ಸೇತುವೆಗಳು ಜಲಾವೃತಗೊಂಡಿವೆ. ಕೃಷ್ಣ ಭಾಗ್ಯ ಜಲ ನಿಗಮದ ಮೂಲಗಳ ಪ್ರಕಾರ, ನಾರಾಯಣಪುರ ಬಸವಸಾಗರ ಜಲಾಶಯದ ಒಳಹರಿವು 5.40 ಲಕ್ಷ ಕ್ಯೂಸೆಕ್ ಇದ್ದು, ಹೊರಹರಿವು 5.20 ಲಕ್ಷ ಕ್ಯೂಸೆಕ್ ಇದೆ. ಕೃಷ್ಣ ನದಿಗೆ ಅಡ್ಡಲಾಗಿ ಕಟ್ಟಿರುವ ಆಲಮಟ್ಟಿ ಜಲಾಶಯದ ಒಳಹರಿವು 5.38 ಕ್ಯೂಸೆಕ್ ಇದ್ದು, ಹೊರಹರಿವು 5.60 ಲಕ್ಷ ಕ್ಯೂಸೆಕ್ ನಷ್ಟಿದೆ.

ಗ್ರಾಮಗಳಲ್ಲಿ ಸರ್ವೆ ನಡೆಸಿದ ನಂತರ ಯಾದಗಿರಿ ಜಿಲ್ಲಾಡಳಿತ, ಕೆಲ ತಾತ್ಕಾಲಿಕ ಪುನರ್ವಸತಿ ಕೇಂದ್ರಗಳನ್ನು ಸ್ಥಾಪಿಸಲು ಆಲೋಚಿಸುತ್ತಿದೆ. ಸರ್ವೆ ನಡೆಸಿದ ನಂತರ, ಮನೆ ಮಾಲೀಕರಿಗೆ ಪರಿಹಾರ ವಿತರಿಸಲಾಗುವುದು. ಮನೆಗಳು ವಾಸಿಸಲು ಯೋಗ್ಯವಾಗಿಲ್ಲವಾದರೆ, ಅಂತಹ ಕುಟುಂಬಗಳು ತಮ್ಮ ಮನೆಯನ್ನು ಪುನರ್ ನಿರ್ಮಿಸುವರೆಗೆ ತಾತ್ಕಾಲಿಕ ವಸತಿ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ. ಕುರ್ಮಾ ರಾವ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT