ಸಂಗ್ರಹ ಚಿತ್ರ 
ರಾಜ್ಯ

ನೆರೆ ಇಳಿದರೂ ತಪ್ಪಿಲ್ಲ ಹೈ.ಕರ್ನಾಟಕ ಭಾಗದ ಜನರ ಗೋಳು, ಸಂತ್ರಸ್ಥರ ಅಳಲು ಕೇಳೋರ್ಯಾರು?

ಹೈದರಾಬಾದ್ ಕರ್ನಾಟಕದಲ್ಲಿ ನೆರೆ ಹಾವಳಿ ಕಡಿಮೆಯಾಗಿದ್ದು, ಬಸವಸಾಗರ ಜಲಾಶಯದ ನೀರಿನ ಒಳಹರಿವು ಇಳಿಮುಖವಾಗಿದೆಯಾದರೂ, ಯಾದಗಿರಿ, ರಾಯಚೂರು ಹಾಗೂ ಕಲಬುರಗಿ ಜಿಲ್ಲೆಗಳ ಬಹುತೇಕ ಪ್ರದೇಶಗಳು ಇನ್ನೂ ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿವೆ. 

ಕಲಬುರಗಿ:  ಹೈದರಾಬಾದ್ ಕರ್ನಾಟಕದಲ್ಲಿ ನೆರೆ ಹಾವಳಿ ಕಡಿಮೆಯಾಗಿದ್ದು, ಬಸವಸಾಗರ ಜಲಾಶಯದ ನೀರಿನ ಒಳಹರಿವು ಇಳಿಮುಖವಾಗಿದೆಯಾದರೂ, ಯಾದಗಿರಿ, ರಾಯಚೂರು ಹಾಗೂ ಕಲಬುರಗಿ ಜಿಲ್ಲೆಗಳ ಬಹುತೇಕ ಪ್ರದೇಶಗಳು ಇನ್ನೂ ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿವೆ.

ಯಾದಗಿರಿ ಹಾಗೂ ರಾಯಚೂರಿಗೆ ಸಂಪರ್ಕ ಕಲ್ಪಿಸುವ ಎರಡು ಸೇತುವೆಗಳು ಜಲಾವೃತಗೊಂಡಿವೆ. ಕೃಷ್ಣ ಭಾಗ್ಯ ಜಲ ನಿಗಮದ ಮೂಲಗಳ ಪ್ರಕಾರ, ನಾರಾಯಣಪುರ ಬಸವಸಾಗರ ಜಲಾಶಯದ ಒಳಹರಿವು 5.40 ಲಕ್ಷ ಕ್ಯೂಸೆಕ್ ಇದ್ದು, ಹೊರಹರಿವು 5.20 ಲಕ್ಷ ಕ್ಯೂಸೆಕ್ ಇದೆ. ಕೃಷ್ಣ ನದಿಗೆ ಅಡ್ಡಲಾಗಿ ಕಟ್ಟಿರುವ ಆಲಮಟ್ಟಿ ಜಲಾಶಯದ ಒಳಹರಿವು 5.38 ಕ್ಯೂಸೆಕ್ ಇದ್ದು, ಹೊರಹರಿವು 5.60 ಲಕ್ಷ ಕ್ಯೂಸೆಕ್ ನಷ್ಟಿದೆ.

ಗ್ರಾಮಗಳಲ್ಲಿ ಸರ್ವೆ ನಡೆಸಿದ ನಂತರ ಯಾದಗಿರಿ ಜಿಲ್ಲಾಡಳಿತ, ಕೆಲ ತಾತ್ಕಾಲಿಕ ಪುನರ್ವಸತಿ ಕೇಂದ್ರಗಳನ್ನು ಸ್ಥಾಪಿಸಲು ಆಲೋಚಿಸುತ್ತಿದೆ. ಸರ್ವೆ ನಡೆಸಿದ ನಂತರ, ಮನೆ ಮಾಲೀಕರಿಗೆ ಪರಿಹಾರ ವಿತರಿಸಲಾಗುವುದು. ಮನೆಗಳು ವಾಸಿಸಲು ಯೋಗ್ಯವಾಗಿಲ್ಲವಾದರೆ, ಅಂತಹ ಕುಟುಂಬಗಳು ತಮ್ಮ ಮನೆಯನ್ನು ಪುನರ್ ನಿರ್ಮಿಸುವರೆಗೆ ತಾತ್ಕಾಲಿಕ ವಸತಿ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ. ಕುರ್ಮಾ ರಾವ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel