ಸಂಗ್ರಹ ಚಿತ್ರ 
ರಾಜ್ಯ

ಕರ್ನಾಟಕ ಪ್ರವಾಹ: ರಂಗನತಿಟ್ಟು ಪಕ್ಷಿಧಾಮದಲ್ಲಿ ತಗ್ಗಿದ ನೆರೆ, ಆದರೂ ಪ್ರವಾಸಿಗರಿಗಿಲ್ಲ ಪ್ರವೇಶ!

ಕರ್ನಾಟಕದ ಖ್ಯಾತ ಪ್ರವಾಸಿತಾಣ ರಂಗನತಿಟ್ಟು ಪಕ್ಷಿಧಾಮದಲ್ಲಿ ಉಂಟಾಗಿದ್ದ ಪ್ರವಾಹ ತಗ್ಗಿದ್ದು, ದ್ವೀಪದಂತಾಗಿದ್ಜ ಗುಡ್ಡಗಳು ನಿಧಾನವಾಗಿ ಹೊರಜಗತ್ತಿಗೆ ಕಾಣತೊಡಗಿವೆ.

ಶ್ರೀರಂಗಪಟ್ಟಣ: ಕರ್ನಾಟಕದ ಖ್ಯಾತ ಪ್ರವಾಸಿತಾಣ ರಂಗನತಿಟ್ಟು ಪಕ್ಷಿಧಾಮದಲ್ಲಿ ಉಂಟಾಗಿದ್ದ ಪ್ರವಾಹ ತಗ್ಗಿದ್ದು, ದ್ವೀಪದಂತಾಗಿದ್ಜ ಗುಡ್ಡಗಳು ನಿಧಾನವಾಗಿ ಹೊರಜಗತ್ತಿಗೆ ಕಾಣತೊಡಗಿವೆ.

ಕೊಡಗು ಮತ್ತು ಮಡಿಕೇರಿ ಭಾಗದಲ್ಲಿ ಸುರಿಯುತ್ತಿದ್ದ ಭಾರಿ ಮಳೆಯಿಂದಾಗಿ ಶರವಾತಿ ನದಿಗೆ ವ್ಯಾಪಕ ನೀರು ಹರಿದಿತ್ತು. ಪರಿಣಾಮ ಭದ್ರಾ ಜಲಾಶಯದಿಂದ ಹೆಚ್ಚುವರಿ ನೀರನ್ನು ಒಮ್ಮೆಲೆ ಹರಿಸಿದ ಪರಿಣಾಮ ಕೆಆರ್ ಎಸ್ ಗು ಕೂಡ ಭಾರಿ ಪ್ರಮಾಣದ ನೀರು ಹರಿದು ಇಲ್ಲಿನ ಖ್ಯಾತ ರಂಗನತಿಟ್ಟು ಪಕ್ಷಿಧಾಮ ಜಲಾವೃತ್ತವಾಗಿತ್ತು. ಇದೀಗ ಪ್ರವಾಹ ತಗ್ಗಿದ್ದು ನೀರಿನ ಪ್ರಮಾಣ ಕೂಡ ಕಡಿಮೆಯಾಗಿದೆ.

ಹೀಗಾಗಿ ರಂಗನತಿಟ್ಟು ಪಕ್ಷಿಧಾಮ ಸಹಜಸ್ಥಿತಿಗೆ ಮರಳುತ್ತಿದೆ. ಪ್ರವಾಹತಗ್ಗಿದ್ದರೂ ರಂಗನತಿಟ್ಟು ಪಕ್ಷಿಧಾಮಕ್ಕೆ ಇನ್ನೂ ಕೆಲ ದಿನಗಳ ಕಾಲ ಪ್ರವಾಸಿಗರ ನಿರ್ಬಂಧಿಸಲು ಇಲ್ಲಿನ ಆಡಳಿತ ಮಂಡಳಿ ನಿರ್ಧರಿಸಿದೆ. ಮುಂದಿನ ಮೂರು ಅಥವಾ ನಾಲ್ಕು ದಿನಗಳ ಕಾಲ ಪರಿಸ್ಥಿತಿ ಅವಲೋಕಿಸಿ ಪ್ರವಾಸಿಗರಿಗೆ ಪ್ರವೇಶ ಕಲ್ಪಿಸುವ ಕುರಿತು ನಿರ್ಧರಿಸಲಾಗುತ್ತದೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel