ಡಾ. ಜನಾರ್ದನ ಹೆಗಡೆ 
ರಾಜ್ಯ

ಸಂಸ್ಕೃತ ವಿದ್ವಾನ್ ಡಾ. ಜನಾರ್ದನ ಹೆಗಡೆಗೆ ರಾಷ್ಟ್ರಪತಿ ಪುರಸ್ಕಾರ

ಕೇಂದ್ರದ ಮಾನವ ಸಂಸಾದನ ಮಂತ್ರಾಲಯವು ಪ್ರತಿವರ್ಷ ಭಾರತೀಯ ಭಾಷೆಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ರಾಷ್ಟ್ರಪತಿ ಪುರಸ್ಕಾರ ನೀಡುತ್ತಿದ್ದು, 2019ನೇ ಸಾಲಿನ ಪುರಸ್ಕಾರಕ್ಕೆ ಸಂಸ್ಕೃತ ವಿದ್ವಾಂಸ ಡಾ. ಜನಾರ್ದನ ಹೆಗಡೆ ಭಾಜನರಾಗಿದ್ದಾರೆ. 

ಬೆಂಗಳೂರು: ಕೇಂದ್ರದ ಮಾನವ ಸಂಸಾದನ ಮಂತ್ರಾಲಯವು ಪ್ರತಿವರ್ಷ ಭಾರತೀಯ ಭಾಷೆಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ರಾಷ್ಟ್ರಪತಿ ಪುರಸ್ಕಾರ ನೀಡುತ್ತಿದ್ದು, 2019ನೇ ಸಾಲಿನ ಪುರಸ್ಕಾರಕ್ಕೆ ಸಂಸ್ಕೃತ ವಿದ್ವಾಂಸ ಡಾ. ಜನಾರ್ದನ ಹೆಗಡೆ ಭಾಜನರಾಗಿದ್ದಾರೆ.

ಸಂಸ್ಕೃತ ಭಾಷೆಗಾಗಿ ಅವರು ಸಲ್ಲಿಸುತ್ತಿರುವ ನಿಸ್ವಾರ್ಥ ಸೇವೆಯನ್ನು ಗಮನಿಸಿ ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ರಾಷ್ಟ್ರಪತಿ ಪ್ರಮಾಣ ಪತ್ರ ಮತ್ತು 5 ಲಕ್ಷ ರೂ ನಗದು ಪುರಸ್ಕಾರ ಒಳಗೊಂಡಿದೆ. ಸಂಸ್ಕೃತ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ಸಂಸ್ಕೃತ ವಿದ್ವಾಂಸರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಸಂಸ್ಕೃತ ಜಗತ್ತಿನ ಅನೇಕ ಗಣ್ಯರು ಡಾ. ಜನಾರ್ದನ ಹೆಗಡೆ ಅವರಿಗೆ ಈ ಪ್ರಶಸ್ತಿ ಲಭಿಸಿರುವುದಕ್ಕೆ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

ಜನಾರ್ದನ ಹೆಗಡೆ ಅವರು “ಸಂಭಾಷಣ ಸಂದೇಶಃ” ಎಂಬ ಸಂಸ್ಕೃತ ಮಾಸಪತ್ರಿಕೆಯ ಸಂಸ್ಥಾಪಕ ಸಂಪಾದಕರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT