ರಾಜ್ಯ

ಕೇರಳ, ಕರ್ನಾಟಕ ಪ್ರವಾಹ: ಸಂತ್ರಸ್ಥರ ನೋವಿಗೆ ಸ್ಪಂದಿಸಿ ತಮಿಳು ನಟ ಸೂರ್ಯ ಸಹೋದರರಿಂದ ದೇಣಿಗೆ

ಕರ್ನಾಟಕ ಮತ್ತು ಕೇರಳದಲ್ಲಿ ಭಾರಿ ಅವಾಂತರ ಸೃಷ್ಟಿಸಿರುವ ಪ್ರವಾಹಕ್ಕೆ ತಮಿಳು ನಟ ಸೂರ್ಯ ಹಾಗೂ ಅವರ ಸಹೋದರ ಕಾರ್ತಿ ಸ್ಪಂದಿಸಿದ್ದು. ಪ್ರವಾಹ ಸಂತ್ರಸ್ಥರ ದೇಣಿಗೆ ನೀಡಿದ್ದಾರೆ.

ಚೆನ್ನೈ: ಕರ್ನಾಟಕ ಮತ್ತು ಕೇರಳದಲ್ಲಿ ಭಾರಿ ಅವಾಂತರ ಸೃಷ್ಟಿಸಿರುವ ಪ್ರವಾಹಕ್ಕೆ ತಮಿಳು ನಟ ಸೂರ್ಯ ಹಾಗೂ ಅವರ ಸಹೋದರ ಕಾರ್ತಿ ಸ್ಪಂದಿಸಿದ್ದು. ಪ್ರವಾಹ ಸಂತ್ರಸ್ಥರ ದೇಣಿಗೆ ನೀಡಿದ್ದಾರೆ.

ಕಾಲಿವುಡ್ ಸೂಪರ್ ಸ್ಚಾರ್ ನಟ ಸೂರ್ಯ ಹಾಗೂ ಅವರ ಸಹೋದರ ಕಾರ್ತಿ ಕೇರಳ ಮತ್ತು ಕರ್ನಾಟಕ ಸಂತ್ರಸ್ತರಿಗೆ ತಲಾ 10 ಲಕ್ಷ ರೂ. ಪರಿಹಾರ ಹಣ ನೀಡಿದ್ದಾರೆ. ತಮಿಳು ಚಲನಚಿತ್ರಗಳ ವಿಮರ್ಶಕ ರಮೇಶ್​ ಬಾಲಾ ಈ ಕುರಿತಂತೆ ತಮ್ಮ ಟ್ವಿಟರ್​ ಖಾತೆಯಲ್ಲಿ ಇದನ್ನು ಖಚಿತಪಡಿಸಿದ್ದಾರೆ. ನಟರಾದ ಸೂರ್ಯ ಹಾಗೂ ಕಾರ್ತಿಕ್​ ಅವರ ಕಾರ್ಯಕ್ಕೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ.

ಪರ ರಾಜ್ಯದ ಜನತೆಯ ಸಂಕಷ್ಟಕ್ಕೆ ಮಿಡಿದ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆಯ ಮಹಾಪೂರವೇ ಹರಿದು ಬರುತ್ತಿದೆ. ಕನ್ನಡಿಗರು ಕೂಡ ನಟರಿಗೆ ಧನ್ಯವಾದಗಳನ್ನುಅರ್ಪಿಸಿದ್ದಾರೆ. ಇನ್ನು ರಾಜ್ಯದಲ್ಲಿ ಪ್ರವಾಹದಿಂದಾಗಿ ಸಾಕಷ್ಟು ನಷ್ಟ ಸಂಭವಿಸಿದ್ದು, ಪ್ರವಾಹ ಸಂತ್ರಸ್ಥರಿಗೆ ನೆರವಾಗಲು ಸಾಕಷ್ಟು ದಾನಿಗಳು ಮುಂದೆ ಬಂದಿದ್ದಾರೆ. ತಮ್ಮ ಕೈಲಾದಷ್ಟು ನೆರವನ್ನು ಸಿಎಂ ಪರಿಹಾರ ನಿಧಿಗೆ ನೀಡಿದ್ದಾರೆ. ಇನ್ನು ಕೆಲವರು ನೇರವಾಗಿ ಸಂತ್ರಸ್ತರಿಗೆ ಅಗತ್ಯವಸ್ತುಗಳನ್ನು ರವಾನಿಸಿದ್ದಾರೆ. ಸ್ಯಾಂಡಲ್​ ವುಡ್​ನಲ್ಲಿಯೂ ಸ್ಟಾರ್​ ನಟರಾದ ಪುನೀತ್​ ರಾಜ್​ಕುಮಾರ್​, ಸುದೀಪ್​, ದರ್ಶನ್​, ಯಶ್​ ಮುಂತಾದವರು ಪ್ರವಾಹ ಸಂತ್ರಸ್ತರಿಗೆ ಮಿಡಿದು, ತಮ್ಮ ಕೈಲಾದ ಮಟ್ಟಿಗೆ ನೆರವಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT