ಯಡಿಯೂರಪ್ಪ 
ರಾಜ್ಯ

ಕ್ಯಾಲಿಫೋರ್ನಿಯಾ ಮಾದರಿಯಲ್ಲಿ ಬೆಂಗಳೂರು ಅಭಿವೃದ್ಧಿ; ಯಡಿಯೂರಪ್ಪ

ಉದ್ಯಾನನಗರಿ ಬೆಂಗಳೂರನ್ನು ಭಾರತದ ಸಿಲಿಕಾನ್ ವ್ಯಾಲಿಯನ್ನಾಗಿ ಪರಿವರ್ತಿಸುವುದು ಸರ್ಕಾರದ ಉದ್ದೇಶ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರು: ಉದ್ಯಾನನಗರಿ ಬೆಂಗಳೂರನ್ನು ಭಾರತದ ಸಿಲಿಕಾನ್ ವ್ಯಾಲಿಯನ್ನಾಗಿ ಪರಿವರ್ತಿಸುವುದು ಸರ್ಕಾರದ ಉದ್ದೇಶ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಸ್ವಾತಂತ್ರೋತ್ಸವದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಸರ್ವತೋಮುಖ ಅಭಿವೃದ್ಧಿಗೆ ‘ಬೆಂಗಳೂರು ಅಭಿವೃದ್ಧಿ ಕಾರ್ಯಪಡೆ’ಯನ್ನು ಬಲಪಡಿಸಲಾಗುವುದು. ನಗರವನ್ನು ಕ್ಯಾಲಿಫೋರ್ನಿಯಾ ಮತ್ತು ಸ್ಯಾನ್ ಫ್ರಾನ್ಸಿಸ್ಕೋ ಸಿಲಿಕಾನ್ ವ್ಯಾಲಿಯ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಗುರಿ ಹೊಂದಲಾಗಿದೆ ಎಂದರು. 

ತಾವು ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಿ ಮೂರು ವಾರವಾಗಿದೆ ರಾಜ್ಯ ಬರ ಮತ್ತು ಭಾರೀ ಪ್ರವಾಹದಿಂದ ತತ್ತರಿಸಿದೆ, ಎಲ್ಲರೂ ಜೊತೆಗೂಡಿ ಸಂತ್ರಸ್ತರ ನೆರವಿಗೆ ನಿಲ್ಲೋಣ ಎಂದು ಕರೆ ನೀಡಿದರು.

ಕೇಂದ್ರ ಸರ್ಕಾರ ಕೂಡ ನೆರೆ ಹಾನಿಗೆ ತಕ್ಷಣ ಸ್ಪಂದಿಸಿದೆ. ನೆರೆಯಲ್ಲಿ ಸಿಲುಕಿದವರ ರಕ್ಷಣೆಗಾಗಿ ಸೇನೆ, ವಿಪತ್ತು ನಿರ್ವಹಣಾ ಪಡೆ,ಸೇನಾ ಹೆಲಿಕ್ಯಾಪ್ಟರ್, ರಕ್ಷಣಾ ದೋಣಿಗಳ ಸೌಲಭ್ಯ ಒದಗಿಸಿದೆ. ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಸದಾನಂದಗೌಡ, ಪ್ರಹ್ಲಾದ್ ಜೋಷಿ ಭೇಟಿ ನೀಡಿ ಹೆಚ್ಚಿನ ಪರಿಹಾರದ ಭರವಸೆ ನೀಡಿದ್ದಾರೆ. ನೆರೆ ಹಾನಿ ವರದಿ ಪಡೆದು ಹೆಚ್ಚಿನ ನೆರವಿಗೆ ಕೇಂದ್ರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT