ಉಪ್ಪಿನಂಗಡಿ: ಚಿನ್ನಾಭರಣ ಮಳಿಗೆಗೆ ಕನ್ನ, 25 ಲಕ್ಷ ಮೌಲ್ಯದ ಚಿನ್ನಾಭರಣ ಕಳವು 
ರಾಜ್ಯ

ಉಪ್ಪಿನಂಗಡಿ: ಚಿನ್ನಾಭರಣ ಮಳಿಗೆಗೆ ಕನ್ನ, 25 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಪ್ರಸಿದ್ದ ಚಿನ್ನಾಭರಣ ಮಳಿಗೆಯೊಂದಕ್ಕೆ ಕನ್ನ ಹಾಕಿದ ದರೋಡೆಕೋರರು ಸರಿ ಸುಮಾರು 25 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿಯಲ್ಲಿ ನಡೆದಿದೆ.

ಉಪ್ಪಿನಂಗಡಿ: ಪ್ರಸಿದ್ದ ಚಿನ್ನಾಭರಣ ಮಳಿಗೆಯೊಂದಕ್ಕೆ ಕನ್ನ ಹಾಕಿದ ದರೋಡೆಕೋರರು ಸರಿ ಸುಮಾರು 25 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿಯಲ್ಲಿ ನಡೆದಿದೆ.

ಉಪ್ಪಿನಂಗಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೀದಿಯಲ್ಲಿರುವ ಆರ್.ಕೆ. ಜ್ಯುವೆಲ್ಲರ್ಸ್ ನಲ್ಲಿ ಈ ಕಳ್ಳತನ ಪ್ರಕರಣ ವರದಿಯಾಗಿದೆ. ಶುಕ್ರವಾರ ನಸುಕಿನ ಜಾವ ಮೂರು ಗಂಟೆ ಸುಮಾರಿಗೆ ಚಿನ್ನದ ಮಳಿಗೆ ಶೆಟರ್ ಬೀಗವನ್ನು ಗ್ಯಾಸ್ ಕಟರ್ ಮೂಲಕ ತುಂಡರಿಸಿದ ಕಳ್ಳರು ಮಳಿಗೆಯಲ್ಲಿದ್ದ ಸುಮಾರು 25 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದಾರೆ.

ಇದೇ ವೇಳೆ ಅಂಗಡಿಯ ಸಿಸಿಟಿವಿ ಸಂಪರ್ಕ ಕಡಿತಗೊಳಿಸಿರುವ ಕಳ್ಳರು ಸಿಸಿಟಿವಿ ಹಾರ್ಡ್ ಡಿಸ್ಕ್ ಅನ್ನು ಸಹ ಹೊತ್ತೊಯ್ದಿದ್ದಾರೆ. ಅಂಗಡಿಯ ಬಾಗಿಲ ಬಳಿ ಬಾಗಿಲು ಮುರಿಯಲು ಬಳಸಿರುವ ವೆಲ್ಡಿಂಗ್ ಗೆ ಬಳಸುವ ಸಿಲೆಂಡರ್, ಎರಡು ಅನಿಲ ಸಿಲೆಂಡರ್, ಗ್ಯಾಸ್ ಕಟರ್ ಗಳು ಪತ್ತೆಯಾಗಿದೆ.

ಉಪ್ಪಿನಂಗಡಿ ಪೇಟೆಗೆ ಓರ್ವ ಕಾವಲುಗಾರನಿದ್ದು ಆತ ಹೆಚ್ಚಾಗಿ ಚಿನ್ನದಂಗಡಿಯ ಸಮೀಪವೇ ಇರುತ್ತಿದ್ದನೆನ್ನಲಾಗಿದೆ. ಆದರೆ ಆತ ಊರು ಗಸ್ತಿಗೆ ಹೋಗಿದ್ದಾಗ ಕಳ್ಳರು ಈ ಕೃತ್ಯ ಎಸಗಿರುವುದ್ಗಾಇ ಹೇಳಲಾಗಿದೆ. 

ಉಪ್ಪಿನಂಗಡಿ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎರಡನೇ ಬಾರಿಗೆ ಭೇಟಿ: ಸತೀಶ್ ಜಾರಕಿಹೊಳಿ ಬಳಿ ಬೆಂಬಲ ಕೇಳಿದ್ರಾ ಡಿಕೆ ಶಿವಕುಮಾರ್!

ರಾಹುಲ್ ಗಾಂಧಿ ಅಥವಾ ಖರ್ಗೆ ಅಲ್ಲ; ಪುಟಿನ್ ಜೊತೆಗಿನ ಭೋಜನಕೂಟಕ್ಕೆ ಕಾಂಗ್ರೆಸ್ ನ ಈ ನಾಯಕನಿಗೆ ಮಾತ್ರ ಆಹ್ವಾನ!

ಅಬಕಾರಿ ಇಲಾಖೆಗೆ 43,000 ಕೋಟಿ ರೂ ತೆರಿಗೆ ಸಂಗ್ರಹದ ಗುರಿ! ವಾಣಿಜ್ಯ ಇಲಾಖೆಗೆ 'ಟಾರ್ಗೆಟ್' ಎಷ್ಟು?

‘ಡೆವಿಲ್': ನಾಳೆ ಮಧ್ಯಾಹ್ನ 1:05 ರಿಂದ ಅಡ್ವಾನ್ಸ್ ಬುಕ್ಕಿಂಗ್ ಓಪನ್ಸ್‌ ! ಈಗಿನಿಂದಲೇ ಅಭಿಮಾನಿಗಳ ಭರ್ಜರಿ ಸಿದ್ಧತೆ, Video

ಪಾಕಿಸ್ತಾದ 'ನ್ಯೂಕ್ಲಿಯರ್ ಬಟನ್' ಈಗ ಅಸಿಮ್ ಮುನೀರ್ ಕೈಯಲ್ಲಿ! ಭಾರತದ ವಿರುದ್ಧ ಸೇಡಿಗೆ ಮುಂದಾಗ್ತಾರಾ?

SCROLL FOR NEXT