ಉಪ್ಪಿನಂಗಡಿ: ಚಿನ್ನಾಭರಣ ಮಳಿಗೆಗೆ ಕನ್ನ, 25 ಲಕ್ಷ ಮೌಲ್ಯದ ಚಿನ್ನಾಭರಣ ಕಳವು 
ರಾಜ್ಯ

ಉಪ್ಪಿನಂಗಡಿ: ಚಿನ್ನಾಭರಣ ಮಳಿಗೆಗೆ ಕನ್ನ, 25 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಪ್ರಸಿದ್ದ ಚಿನ್ನಾಭರಣ ಮಳಿಗೆಯೊಂದಕ್ಕೆ ಕನ್ನ ಹಾಕಿದ ದರೋಡೆಕೋರರು ಸರಿ ಸುಮಾರು 25 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿಯಲ್ಲಿ ನಡೆದಿದೆ.

ಉಪ್ಪಿನಂಗಡಿ: ಪ್ರಸಿದ್ದ ಚಿನ್ನಾಭರಣ ಮಳಿಗೆಯೊಂದಕ್ಕೆ ಕನ್ನ ಹಾಕಿದ ದರೋಡೆಕೋರರು ಸರಿ ಸುಮಾರು 25 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿಯಲ್ಲಿ ನಡೆದಿದೆ.

ಉಪ್ಪಿನಂಗಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೀದಿಯಲ್ಲಿರುವ ಆರ್.ಕೆ. ಜ್ಯುವೆಲ್ಲರ್ಸ್ ನಲ್ಲಿ ಈ ಕಳ್ಳತನ ಪ್ರಕರಣ ವರದಿಯಾಗಿದೆ. ಶುಕ್ರವಾರ ನಸುಕಿನ ಜಾವ ಮೂರು ಗಂಟೆ ಸುಮಾರಿಗೆ ಚಿನ್ನದ ಮಳಿಗೆ ಶೆಟರ್ ಬೀಗವನ್ನು ಗ್ಯಾಸ್ ಕಟರ್ ಮೂಲಕ ತುಂಡರಿಸಿದ ಕಳ್ಳರು ಮಳಿಗೆಯಲ್ಲಿದ್ದ ಸುಮಾರು 25 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದಾರೆ.

ಇದೇ ವೇಳೆ ಅಂಗಡಿಯ ಸಿಸಿಟಿವಿ ಸಂಪರ್ಕ ಕಡಿತಗೊಳಿಸಿರುವ ಕಳ್ಳರು ಸಿಸಿಟಿವಿ ಹಾರ್ಡ್ ಡಿಸ್ಕ್ ಅನ್ನು ಸಹ ಹೊತ್ತೊಯ್ದಿದ್ದಾರೆ. ಅಂಗಡಿಯ ಬಾಗಿಲ ಬಳಿ ಬಾಗಿಲು ಮುರಿಯಲು ಬಳಸಿರುವ ವೆಲ್ಡಿಂಗ್ ಗೆ ಬಳಸುವ ಸಿಲೆಂಡರ್, ಎರಡು ಅನಿಲ ಸಿಲೆಂಡರ್, ಗ್ಯಾಸ್ ಕಟರ್ ಗಳು ಪತ್ತೆಯಾಗಿದೆ.

ಉಪ್ಪಿನಂಗಡಿ ಪೇಟೆಗೆ ಓರ್ವ ಕಾವಲುಗಾರನಿದ್ದು ಆತ ಹೆಚ್ಚಾಗಿ ಚಿನ್ನದಂಗಡಿಯ ಸಮೀಪವೇ ಇರುತ್ತಿದ್ದನೆನ್ನಲಾಗಿದೆ. ಆದರೆ ಆತ ಊರು ಗಸ್ತಿಗೆ ಹೋಗಿದ್ದಾಗ ಕಳ್ಳರು ಈ ಕೃತ್ಯ ಎಸಗಿರುವುದ್ಗಾಇ ಹೇಳಲಾಗಿದೆ. 

ಉಪ್ಪಿನಂಗಡಿ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎನ್‌ಸಿಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಸುನೇತ್ರಾ ಪವಾರ್ ಆಯ್ಕೆ, ಸಂಜೆ ಮಹಾ DCM ಆಗಿ ಪ್ರಮಾಣ

ಬೀದರ್ ನಲ್ಲಿ ನಿಗೂಢ ಸ್ಫೋಟ; 4 ಮಕ್ಕಳು ಸೇರಿ 6 ಮಂದಿಗೆ ಗಾಯ, 6 ತಿಂಗಳಲ್ಲಿ ಎರಡನೇ ಬ್ಲಾಸ್ಟ್! Video

ಗುಪ್ತರೋಗ, 2 ಸಾವಿರ ವಿಡಿಯೋ, ರಷ್ಯಾ ಯುವತಿಯರು..: Bill Gates 'ಕರಾಳ' ರಹಸ್ಯ ಕುರಿತ 3 ಲಕ್ಷ ಪುಟಗಳ Epstein ಫೈಲ್ ಬಹಿರಂಗ!

ಸಿಜೆ ರಾಯ್ ಅವರೇ ಶೂಟ್ ಮಾಡಿಕೊಂಡ್ರಾ ಅಥವಾ ಶೂಟ್ ಮಾಡಿದ್ರಾ? ಪ್ರದೀಪ್ ಈಶ್ವರ್ ಅನುಮಾನ!

ಯಾರನ್ನೂ ಕರ್ಮ ಬಿಡಲ್ಲ: ಸಿಜೆ ರಾಯ್ ಸಾವಿನ ಬೆನ್ನಲ್ಲೇ 'ಬಿಗ್ ಬಾಸ್' ಮಾಜಿ ಸ್ಪರ್ಧಿ ಪೋಸ್ಟ್!

SCROLL FOR NEXT