ರಾಜ್ಯ

ಮಂಗಳೂರು: 9 ಮಂದಿ ಅನುಮಾನಾಸ್ಪದ ವ್ಯಕ್ತಿಗಳ ಬಂಧನ

Raghavendra Adiga

ಮಂಗಳೂರು: ಮಂಗಳೂರಿನ ಲಾಡ್ಜ್ ನಲ್ಲಿದ್ದ 9 ಮಂದಿ ಅನುಮಾನಾಸ್ಪದ ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇಲ್ಲಿನ ಪಂಪ್ ವೆಲ್ ಬಳಿಯ ಲಾಡ್ಜ್‌ ಒಂದರಲ್ಲಿ ಅನು ಮಾನಾಸ್ಪದ ವ್ಯಕ್ತಿಗಳು ಇದ್ದಾರೆ ಎಂಬ ಮಾಹಿತಿ ಮೇರೆಗೆ ಮಂಗಳೂರಿನ ಕದ್ರಿ ಪೊಲೀಸರು ಕಳೆದ ರಾತ್ರಿ ದಾಳಿ ನಡೆಸಿ ಅಲ್ಲಿದ್ದ 9 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅವರು ಮಡಿಕೇರಿ ಮತ್ತು ಕೇರಳ ಮತ್ತು ಮಂಗಳೂರು ನಿವಾಸಿಗಳು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

'ಭಾರತ ಸರ್ಕಾರ' ಎಂಬ ಬರಹವಿದ್ದ ಕಾರಿನಲ್ಲಿ ಅವರು ಬಂದಿದ್ದರು. ಕಾರಿನ ಮುಂಭಾಗ ನ್ಯಾಶನಲ್ ಕ್ರೈಮ್ ಇನ್ವಿಶ್ಟಿಗೇಶನ್ ಬ್ಯೂರೋ ಎಂಬ ಫಲಕ ಇತ್ತು. ಇದರಿಂದ ಅನುಮಾನಗೊಂಡ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತಂತೆ ಹೆಚ್ಚಿನ ಮಾಹಿತಿ ನೀಡಲು ಪೋಲೀಸ್ ಅಧಿಕಾರಿಗಳು ನಿರಾಕರಿಸಿದ್ದಾರೆ.

SCROLL FOR NEXT