ರಾಜ್ಯ

ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ತಾತ್ಕಾಲಿಕ ನಿಷೇಧ 

Sumana Upadhyaya

ಶಿವಮೊಗ್ಗ: ಭಾರೀ ಮಳೆಯಿಂದ ರಸ್ತೆ ಹಾಳಾಗಿರುವುದರಿಂದ ಮತ್ತು ಭೂಕುಸಿತ ಉಂಟಾಗುವ ಸಾಧ್ಯತೆಯಿರುವ ಆತಂಕದಿಂದ ಆಗುಂಬೆ ಘಾಟಿಯಲ್ಲಿ 12 ಟನ್ ಗಿಂತ ಹೆಚ್ಚು ತೂಕವಿರುವ ಭಾರೀ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಶಿವಮೊಗ್ಗ ಜಿಲ್ಲಾಡಳಿತ ಆದೇಶ ಹೊರಡಿಸಿದೆ. 


ಈ ಸಂಬಂಧ ಜಿಲ್ಲಾಧಿಕಾರಿ ಕೆ ಬಿ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 169ಎಯಲ್ಲಿ ಭಾರೀ ಮಳೆಯಿಂದ ಹಾನಿಗೀಡಾಗಿದೆ.


ಮುಂಗಾರು ಮಳೆ ಮುಗಿಯುವವರೆಗೆ ಈ ಹೆದ್ದಾರಿಯಲ್ಲಿ ಮಿನಿ ಬಸ್ ಗಳು, ಜೀಪು, ವ್ಯಾನ್ ಮತ್ತು ಕಾರುಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಜುಲೈ 3ರಂದು ಜಿಲ್ಲಾಡಳಿತಕ್ಕೆ ಹೊರಡಿಸಿದ್ದ ಆದೇಶದಲ್ಲಿ ಹೆದ್ದಾರಿಯಲ್ಲಿ ಮಳೆಗಾಲ ಮುಗಿಯುವವರೆಗೆ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿತ್ತು.

SCROLL FOR NEXT